For the best experience, open
https://m.newskannada.com
on your mobile browser.
Advertisement

ಸಂಘಟನೆಗಳ ಶಾಂತಿಯುತ ಪ್ರತಿಭಟನೆಗೆ ಪೊಲೀಸ್‌ ವರಿಷ್ಠಾಧಿಕಾರಿಯ ಸಹಾಯ ಕೇಳಿದ ಮೊಯಿದೀನ್ ಬಾವ

ನಗರದ ಮಾಜಿ ಶಾಸಕ ಮೊಯಿದೀನ್ ಬಾವ ಅವರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಿಗೆ ಮಸಿ ಬಳಿಯಲು ಅವಕಾಶ ನೀಡಬಾರದು.
04:47 PM Mar 04, 2024 IST | Nisarga K
ಸಂಘಟನೆಗಳ ಶಾಂತಿಯುತ ಪ್ರತಿಭಟನೆಗೆ ಪೊಲೀಸ್‌ ವರಿಷ್ಠಾಧಿಕಾರಿಯ ಸಹಾಯ ಕೇಳಿದ ಮೊಯಿದೀನ್ ಬಾವ
ಶಾಂತಿಯುತ ಪ್ರತಿಭಟನೆ ನಡೆಸುವಂತೆ ಮಾಜಿ ಶಾಸಕ ಮೊಯಿದೀನ್ ಬಾವ ಮನವಿ

ಮಂಗಳೂರು:   ನಾಳೆ (ಮಾರ್ಚ್5)‌ ಮಲ್ಪೆ ಯಿಂದ ಕನ್ನಡ ಸಂಘಟನೆಗಳು  ಬೋರ್ಡ್‌ ತೆಗೆಯುವ ಮೂಲಕ  ಪ್ರತಿಭಟನೆ ನಡೆಸುವುದಾಗಿ ಮಾಜಿ ಶಾಸಕ ಮೊಯಿದೀನ್ ಬಾವ ಅವರು ತಿಳಿಸಿದ್ದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿ ಸಂಘಟನೆಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು  ಸಂಘಟನೆಗಳಿಗೆ ತಿಳಿಹೇಳಬೇಕು ಎಂದು ಮನವಿ ಮಾಡಿದ್ದಾರೆ.

Advertisement

ನಗರದ ಮಾಜಿ ಶಾಸಕ ಮೊಯಿದೀನ್ ಬಾವ ಅವರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಿಗೆ ಮಸಿ ಬಳಿಯಲು ಅವಕಾಶ ನೀಡಬಾರದು. ತುಳು, ಕನ್ನಡ ಸೇರಿದಂತೆ ವಿವಿಧ ಭಾಷೆಗಳನ್ನು ಗೌರವಿಸುವ ತುಳುನಾಡಿನಲ್ಲಿ ಸೌಹಾರ್ದತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.. ಹೋರಾಟ ಮಾಡುವುದು ಎಲ್ಲರ ಹಕ್ಕು ಆದರೆ ಶಾಂತಿಯುತ ಪ್ರತಿಭಟನೆ ನಡೆಸಲು ಹೋರಾಟಗಾರರಿಗೆ ತಿಳಿಸುವಂತೆ ಮನವಿ ಮಾಡಿದರು.

Advertisement
Advertisement
Tags :
Advertisement