For the best experience, open
https://m.newskannada.com
on your mobile browser.
Advertisement

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ ತಾಯಿಯ ನಿರ್ಲಕ್ಷ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು. ಆದರೀಗ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳನ್ನು ಎದುರಿಸಿದ ತಾಯಿ ಸಾವಿನ ದಾರಿ ಹಿಡಿದಿದ್ದಾರೆ.
04:21 PM May 20, 2024 IST | Ashitha S
ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು  ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಚೆನ್ನೆೈ: ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ ತಾಯಿಯ ನಿರ್ಲಕ್ಷ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು. ಆದರೀಗ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳನ್ನು ಎದುರಿಸಿದ ತಾಯಿ ಸಾವಿನ ದಾರಿ ಹಿಡಿದಿದ್ದಾರೆ.

Advertisement

ರಮ್ಯಾ ಆತ್ಮಹತ್ಯೆ ಮಾಡಿಕೊಂಡ ತಾಯಿ. ಅನೇಕ ಟೀಕೆಗಳನ್ನು ಎದುರಿಸಿ ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಗು ಬಿದ್ದ ಘಟನೆಗೆ ತಾಯಿ ರಮ್ಯಾನೇ ಕಾರಣ ಎಂದು ಟೀಕಿಸಿದ್ದರಿಂದ ನೊಂದಿದ್ದರು ಎಂದು ತಿಳಿದುಬಂದಿದೆ.

ಇನ್ನು ಆಕೆ ಮಗುವನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಆದರೆ ಇದು ಕೇವಲ ಒಂದು ಅಪಘಾತ ಎಂದು ಅಕ್ಕಪಕ್ಕದ ಮನೆಯವರು ಹೇಳಿದ್ದರು. ಘಟನೆಯ ನಂತರ ರಮ್ಯಾ ತನ್ನ ಮಗುವನ್ನು ಕರಮಡೈನಲ್ಲಿರುವ ತನ್ನ ಪೋಷಕರ ಮನೆಗೆ ಕರೆದುಕೊಂಡು ಹೋಗಿದ್ದರು. ಭಾನುವಾರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಮ್ಯಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Advertisement

Advertisement
Tags :
Advertisement