ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪತ್ನಿಯನ್ನು ಕೊಂದು ಬೆಡ್​ರೂಂನಲ್ಲಿ ಬಚ್ಚಿಟ್ಟಿದ್ದ ವ್ಯಕ್ತಿಯ ಬಂಧನ

ಮದ್ಯದ ಅಮಲಿನಲ್ಲಿದ್ದ ಪತ್ನಿ, ಪತಿಯನ್ನು ನಿಂದಿಸಿದಕ್ಕೆ ಆತ ಮರದ ಹಲಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.
10:45 AM Mar 15, 2024 IST | Gayathri SG

ಭುವನೇಶ್ವರ: ಮದ್ಯದ ಅಮಲಿನಲ್ಲಿದ್ದ ಪತ್ನಿ, ಪತಿಯನ್ನು ನಿಂದಿಸಿದಕ್ಕೆ ಆತ ಮರದ ಹಲಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.

Advertisement

ಈ ಘಟನೆ ಮಂಗಳವಾರ ಮೈತ್ರಿ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಣಿ ನಗರದ ಕೊಳೆಗೇರಿಯಲ್ಲಿ ಸಂಭವಿಸಿದೆ. ವ್ಯಕ್ತಿ ಶವವನ್ನು ಕೋಣೆಯಲ್ಲಿ ಬಚ್ಚಿಟ್ಟು, ಎರಡು ದಿನಗಳ ಕಾಲ ಅದರೊಂದಿಗೆ ವಾಸಿಸುತ್ತಿದ್ದ, ಗುರುವಾರ ಮಗ ಶವವನ್ನು ಪತ್ತೆ ಮಾಡಿದ್ದ. ಗಂಜಾಂ ಮೂಲದ ವ್ಯಕ್ತಿ ತನ್ನ ಪತ್ನಿ ಮತ್ತು ಮೂವರು ಪುತ್ರರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಪತ್ನಿ ಮದ್ಯವ್ಯಸನಿಯಾಗಿದ್ದು, ಮಂಗಳವಾರ ಮಧ್ಯಾಹ್ನ ಕುಡಿದು ಬಂದು ಆತನನ್ನು ನಿಂದಿಸಲು ಆರಂಭಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ವ್ಯಕ್ತಿ ಆಕೆಯನ್ನು ಮರದ ಹಲಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸದ್ಯ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Advertisement
Tags :
BreakingNewsLatestNewsNewsKannadaಭುವನೇಶ್ವರ
Advertisement
Next Article