For the best experience, open
https://m.newskannada.com
on your mobile browser.
Advertisement

ಇಂದಿನಿಂದ ಮೈಸೂರು-ಚೆನ್ನೈ "ವಂದೇ ಭಾರತ್" ರೈಲು ಸೇವೆ ಆರಂಭ

ಬೆಂಗಳೂರಿನ ಮೂಲಕ ಮೈಸೂರು ಮತ್ತು ಚೆನ್ನೈಗೆ ಸಂಪರ್ಕ ಕಲ್ಪಿಸುವ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಚಾರ ಆರಂಭಿಸಿದೆ. ಮೈಸೂರಿನಲ್ಲಿ ಪ್ರೀಮಿಯಂ ರೈಲನ್ನು ನಿರ್ವಹಿಸಲು ಅಗತ್ಯ ಸೌಲಭ್ಯಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ ಎಂದು ನೈಋತ್ಯ ರೈಲ್ವೆ ಗುರವಾರವೇ ತಿಳಿಸಿತ್ತು.
10:52 AM Apr 05, 2024 IST | Ashitha S
ಇಂದಿನಿಂದ ಮೈಸೂರು ಚೆನ್ನೈ  ವಂದೇ ಭಾರತ್  ರೈಲು ಸೇವೆ ಆರಂಭ

ಬೆಂಗಳೂರು: ಬೆಂಗಳೂರಿನ ಮೂಲಕ ಮೈಸೂರು ಮತ್ತು ಚೆನ್ನೈಗೆ ಸಂಪರ್ಕ ಕಲ್ಪಿಸುವ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಚಾರ ಆರಂಭಿಸಿದೆ. ಮೈಸೂರಿನಲ್ಲಿ ಪ್ರೀಮಿಯಂ ರೈಲನ್ನು ನಿರ್ವಹಿಸಲು ಅಗತ್ಯ ಸೌಲಭ್ಯಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ ಎಂದು ನೈಋತ್ಯ ರೈಲ್ವೆ ಗುರವಾರವೇ ತಿಳಿಸಿತ್ತು.

Advertisement

ಈ ರೈಲಿಗೆ ಮಾರ್ಚ್ 12 ರಂದು ಪ್ರಧಾನಿ ಮೋದಿ ಆನ್​ಲೈನ್ ಮೂಲಕ ಚಾಲನೆ ನೀಡಿದ್ದರು. ನಂತರ ರೈಲು ಭಾಗಶಃ ಸಂಚಾರ ಆರಂಭಿಸಿತ್ತು.

ವಂದೇ ಭಾರತ್ ರೈಲುಗಳನ್ನು ನಿರ್ವಹಿಸಲು ಮೈಸೂರಿನಲ್ಲಿ ಸೌಲಭ್ಯದ ಕೊರತೆಯಿಂದಾಗಿ ಮಾರ್ಚ್ 14 ರಿಂದ ಏಪ್ರಿಲ್ 4 ರ ನಡುವಣ ಅವಧಿಯಲ್ಲಿ ರೈಲು ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್​ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ ಮತ್ತು ಚೆನ್ನೈ ಸೆಂಟ್ರಲ್ ನಡುವೆ ಸಂಚರಿಸುತ್ತಿತ್ತು. ಈ ರೈಲು ಬುಧವಾರ ಹೊರತುಪಡಿಸಿ ಪ್ರತಿ ದಿನ ಸಂಚರಿಸುತ್ತದೆ.

Advertisement

ಏಪ್ರಿಲ್ 5 ಮತ್ತು ಜುಲೈ 29 ರ ನಡುವೆ, ಬುಧವಾರದಂದು ಈ ರೈಲು ಸಂಚರಿಸುವುದಿಲ್ಲ. ಜುಲೈ 30 ರಿಂದ, ಇದು ಗುರುವಾರದಂದು ಕಾರ್ಯನಿರ್ವಹಿಸುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಇದು ಮೈಸೂರು ಮತ್ತು ಚೆನ್ನೈ ನಡುವಿನ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ.

Advertisement
Tags :
Advertisement