ಬಿ ಕೆ ಹರಿಪ್ರಸಾದ್ ವಿರುದ್ಧ ಕೆಂಡಕಾರಿದ ನಳಿನ್ ಕುಮಾರ್ ಕಟೀಲ್; ಬಂಧಿಸುವಂತೆ ಆಗ್ರಹ
ಮೊದಲು ಬಿ ಕೆ ಹರಿಪ್ರಸಾದ್ ಅವರನ್ನು ಬಂಧಿಸುವಂತೆ ಸರಕಾರಕ್ಕೆ ಆಗ್ರಹಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
01:58 PM Jan 04, 2024 IST
|
Ramya Bolantoor
ಮಂಗಳೂರು: ಮೊದಲು ಬಿ ಕೆ ಹರಿಪ್ರಸಾದ್ ಅವರನ್ನು ಬಂಧಿಸುವಂತೆ ಸರಕಾರಕ್ಕೆ ಆಗ್ರಹಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Advertisement
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ ಕೆ ಹರಿಪ್ರಸಾದ್ ಗೋದ್ರಾ ಹೇಳಿಕೆ ಕುರಿತು ಮುಖ್ಯಮಂತ್ರಿಗಳು ಯಾವುದೇ ಮಾಹಿತಿ ಇಲ್ಲ ಅನ್ನುತ್ತಾರೆ. ಈ ಬಗ್ಗೆ ಗೃಹ ಸಚಿವರಿಗೂ ಮಾಹಿತಿ ಇಲ್ಲ ಎಂದಿದ್ದಾರೆ.
ಬಿ ಕೆ ಹರಿಪ್ರಸಾದ್ ಅವರಿಗಿರುವ ಮಾಹಿತಿಯನ್ನು ಗೃಹ ಇಲಾಖೆಗೆ ಕೊಡಬೇಕು. ಉಪ ಮುಖ್ಯಮಂತ್ರಿ ಗಳು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Advertisement
ತಕ್ಷಣ ಬಿ ಕೆ ಹರಿಪ್ರಸಾದ್ ಅವರನ್ನು ಬಂಧಿಸಬೇಕು. ಜೊತೆಗೆ ಗೋದ್ರಾ ಘಟನೆಯ ಹಿಂದೆ ಕಾಂಗ್ರೆಸ್ ಇತ್ತು. ಅಂದಿನ ಮೋದಿ ಸರಕಾರವನ್ನು ಬೀಳಿಸುವ ಕುತಂತ್ರವನ್ನು ಕಾಂಗ್ರೆಸ್ ಮಾಡಿದೆ.
ಇಂತಹ ಷಡ್ಯಂತ್ರ ವನ್ನು ಇನ್ನೊಮ್ಮೆ ಕಾಂಗ್ರೆಸ್ ಮಾಡಲಿದೆ. ಈ ಹಿನ್ನೆಲೆಯಲ್ಲಿ ಹರಿಪ್ರಸಾದ್ ಬಂಧಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
Advertisement
Next Article