ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿ ಕೆ ಹರಿಪ್ರಸಾದ್ ವಿರುದ್ಧ ಕೆಂಡಕಾರಿದ ನಳಿನ್ ಕುಮಾರ್ ಕಟೀಲ್; ಬಂಧಿಸುವಂತೆ ಆಗ್ರಹ

ಮೊದಲು ಬಿ ಕೆ ಹರಿಪ್ರಸಾದ್ ಅವರನ್ನು ಬಂಧಿಸುವಂತೆ ಸರಕಾರಕ್ಕೆ ಆಗ್ರಹಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
01:58 PM Jan 04, 2024 IST | Ramya Bolantoor

ಮಂಗಳೂರು: ಮೊದಲು ಬಿ ಕೆ ಹರಿಪ್ರಸಾದ್ ಅವರನ್ನು ಬಂಧಿಸುವಂತೆ ಸರಕಾರಕ್ಕೆ ಆಗ್ರಹಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ ಕೆ ಹರಿಪ್ರಸಾದ್ ಗೋದ್ರಾ ಹೇಳಿಕೆ ಕುರಿತು ಮುಖ್ಯಮಂತ್ರಿಗಳು ಯಾವುದೇ ಮಾಹಿತಿ ಇಲ್ಲ ಅನ್ನುತ್ತಾರೆ. ಈ ಬಗ್ಗೆ ಗೃಹ ಸಚಿವರಿಗೂ ಮಾಹಿತಿ ಇಲ್ಲ ಎಂದಿದ್ದಾರೆ.

ಬಿ ಕೆ ಹರಿಪ್ರಸಾದ್ ಅವರಿಗಿರುವ ಮಾಹಿತಿಯನ್ನು ಗೃಹ ಇಲಾಖೆಗೆ ಕೊಡಬೇಕು. ಉಪ ಮುಖ್ಯಮಂತ್ರಿ ಗಳು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Advertisement

ತಕ್ಷಣ ಬಿ ಕೆ ಹರಿಪ್ರಸಾದ್ ಅವರನ್ನು ಬಂಧಿಸಬೇಕು. ಜೊತೆಗೆ ಗೋದ್ರಾ ಘಟನೆಯ ಹಿಂದೆ ಕಾಂಗ್ರೆಸ್ ಇತ್ತು. ಅಂದಿನ‌ ಮೋದಿ ಸರಕಾರವನ್ನು ಬೀಳಿಸುವ ಕುತಂತ್ರವನ್ನು ಕಾಂಗ್ರೆಸ್ ಮಾಡಿದೆ.

ಇಂತಹ‌ ಷಡ್ಯಂತ್ರ ವನ್ನು ಇನ್ನೊಮ್ಮೆ ಕಾಂಗ್ರೆಸ್ ಮಾಡಲಿದೆ. ಈ ಹಿನ್ನೆಲೆಯಲ್ಲಿ ಹರಿಪ್ರಸಾದ್ ಬಂಧಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್‌ ಒತ್ತಾಯಿಸಿದ್ದಾರೆ.

Advertisement
Tags :
BJPCongressLatestNewsNewsKannadaPOLITICSಮಂಗಳೂರು
Advertisement
Next Article