ಮಾನವ ಹಕ್ಕು ಆಯೋಗ ಅಧ್ಯಕ್ಷರಾಗಿ ನಾರಾಯಣಸ್ವಾಮಿ
ರಾಜ್ಯ ಸರ್ಕಾರ ಎಂಟು ತಿಂಗಳ ಬಳಿಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆಅಧ್ಯಕ್ಷರನ್ನು ಆಯ್ಕೆ ಮಾಡಿದೆ. ನಿವೃತ್ತ ನ್ಯಾ. ಎಲ್. ನಾರಾಯಣಸ್ವಾಮಿ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
08:09 PM Nov 27, 2023 IST
|
Ashika S
ಬೆಂಗಳೂರು: ರಾಜ್ಯ ಸರ್ಕಾರ ಎಂಟು ತಿಂಗಳ ಬಳಿಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆಅಧ್ಯಕ್ಷರನ್ನು ಆಯ್ಕೆ ಮಾಡಿದೆ. ನಿವೃತ್ತ ನ್ಯಾ. ಎಲ್. ನಾರಾಯಣಸ್ವಾಮಿ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
Advertisement
ಸರ್ಕಾರ ಅಧ್ಯಕ್ಷರ ಜೊತೆಗೆ ಇಬ್ಬರು ಸದಸ್ಯರನ್ನು ಸಹ ಆಯ್ಕೆ ಮಾಡಿದೆ. ನಿವೃತ್ತ ಜಿಲ್ಲಾ ನ್ಯಾ. ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಾಮ್ ಭಟ್ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸುಮಾರು 4,800ಕ್ಕೂ ಅಧಿಕ ಪ್ರಕರಣಗಳು ತನಿಖೆಯಾಗದೆ ಬಾಕಿ ಉಳಿದಿವೆ.
ಈಗ ಅಧ್ಯಕ್ಷರು ಆಯ್ಕೆಯಾಗಿದ್ದರಿಂದ ತನಿಖೆ ಮುಂದುವರೆಯಲಿವೆ. ಮಂಗಳವಾರದಿಂದ ಬಾಕಿ ಉಳಿದಿದ್ದ ಪ್ರಕರಣಗಳ ತನಿಖೆ ಆರಂಭ ಆಗುವ ಸಾಧ್ಯತೆ ಇದೆ.
Advertisement
Advertisement
Next Article