ಜೆಟ್ ಏರ್ವೇಸ್ನ ನರೇಶ್ ಗೋಯಲ್ಗೆ ಕೊನೆಗೂ ಜಾಮೀನು ಮಂಜೂರು
ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪವಿರುವ ಪ್ರಕರಣ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಕೊನೆಗೂ ಜಾಮೀನು ಮಂಜೂರುರಾಗಿದೆ.
ಬಾಂಬೆ ಉಚ್ಚ ನ್ಯಾಯಾಲಯವು ನರೇಶ್ ಗೋಯಲ್ ಅವರಿಗೆ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಒದಗಿಸಿದೆ.
ರಿಲಾಯನ್ಸ್ ಆಸ್ಪತ್ರೆಯಲ್ಲಿರುವ ನರೇಶ್ ಗೋಯಲ್ ಕ್ಯಾನ್ಸರ್ ರೋಗಿಯಾಗಿದ್ದು, ವೈದ್ಯಕೀಯ ಮತ್ತು ಮಾನವೀಯತೆಯ ಆಧಾರದ ಮೇಲೆ ಬೇಲ್ ಕೊಡಲಾಗಿದೆ. ಬದಲಾಗಿ ಒಂದು ಲಕ್ಷ ರೂ ಶೂರಿಟಿ ಪಡೆಯಲಾಗಿದೆ. ಜೆಟ್ ಏರ್ವೇಸ್ನ ಸಂಸ್ಥಾಪಕರಾಗಿರುವ ಅವರು ಹಾಗೂ ಪತ್ನಿ ಅನಿತಾ ಇಬ್ಬರೂ ಕೂಡ ಕ್ಯಾನ್ಸರ್ ರೋಗಿಗಳಾಗಿದ್ದಾರೆ.
ಜೆಟ್ ಏರ್ವೇಸ್ಗೆ ಕೆನರಾ ಬ್ಯಾಂಕ್ನಿಂದ ನೀಡಲಾಗಿದ್ದ 538.62 ಕೋಟಿ ರೂ ಮೊತ್ತದ ಸಾಲವನ್ನು ಉದ್ದೇಶಿತ ಕಾರ್ಯಗಳಿಗೆ ಬಳಸದೆ ಅಕ್ರಮವಾಗಿ ಬೇರೆಡೆಗೆ ವರ್ಗಾಯಿಸಿಲಾಗಿದೆ ಎನ್ನುವ ಆರೋಪ ನರೇಶ್ ಗೋಯಲ್, ಅವರ ಪತ್ನಿ ಅನಿತಾ ಮತ್ತಿತರರ ಮೇಲೆ ಇದೆ. 2023ರ ಸೆಪ್ಟಂಬರ್ನಲ್ಲಿ ಜಾರಿ ನಿರ್ದೇಶನಾಲಯವು ನರೇಶ್ ಗೋಯಲ್ರನ್ನು ಬಂಧಿಸಿತ್ತು.
ನವೆಂಬರ್ ತಿಂಗಳಲ್ಲಿ ಅನಿತಾ ಗೋಯಲ್ ಅವರನ್ನೂ ಬಂಧಿಸಲಾಗಿತ್ತು. ಆದರೆ, ಅನಿತಾ ಅವರ ಆರೋಗ್ಯ ಸ್ಥಿತಿ ಗಮನಿಸಿ ಅವರಿಗೆ ವಿಶೇಷ ಕೋರ್ಟ್ನಿಂದ ಆಗಲೇ ಜಾಮೀನು ಸಿಕ್ಕಿತ್ತು. ಇದೀಗ ನರೇಶ್ ಗೋಯಲ್ಗೂ ಜಾಮೀನು ಮಂಜೂರು ಆಗಿದೆ.