ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೇಜಾರು ಕೊಲೆ ಪ್ರಕರಣ: ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಅಬ್ದುಲ್ ಅಜೀಮ್

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ತಾಯಿ ಮತ್ತು‌ ಮಕ್ಕಳ ಕೊಲೆಯಾದ ನೇಜಾರಿನ ಮನೆಗೆ ಇಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
06:27 PM Nov 28, 2023 IST | Gayathri SG

ಉಡುಪಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ತಾಯಿ ಮತ್ತು‌ ಮಕ್ಕಳ ಕೊಲೆಯಾದ ನೇಜಾರಿನ ಮನೆಗೆ ಇಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

Advertisement

ಕುಟುಂಬದ ಯಜಮಾನ ನೂರ್ ಮೊಹಮ್ಮದ್ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ದುಲ್ ಅಜೀಮ್ ಅವರು, ಇದೊಂದು ಅಪರೂಪದ ಪ್ರಕರಣವೆಂದು ಸರಕಾರ ಪರಿಗಣಿಸಬೇಕು. ಹೀಗಾಗಿ ವರ್ಷದೊಳಗೆ ಪ್ರಕರಣದ ವಿಚಾರಣೆ ಮುಗಿಸಿ ಆರೋಪಿಗೆ ಮರಣದಂಡನೆ ವಿಧಿಸುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಶಿಫಾರಸು ಮಾಡಲಾಗುವುದು ಎಂದರು.

ಪ್ರಕರಣದ ಬಗ್ಗೆ ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸಿ ಆರೋಪಿಗೆ ಮರಣದಂಡನೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಮೃತ ಐನಾಝ್ ಸಹೋದರ ಅಸಾದ್ ಅವರನ್ನು ಅನುಕಂಪದ ಆಧಾರದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಸರಕಾರ ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

Advertisement

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎಂ.ಎ. ಗಫೂರ್, ಕುಟುಂಬದ ಸದಸ್ಯರಾದ ಅಶ್ರಫ್ ಇತರರು ಉಪಸ್ಥಿತರಿದ್ದರು.

Advertisement
Tags :
LatestNewsNewsKannadaUDUPI
Advertisement
Next Article