ಟಿ20 ವಿಶ್ವಕಪ್ : ಕೆ.ಎಲ್. ರಾಹುಲ್ಗೆ ಇಲ್ಲ ಅವಕಾಶ
ಇಂದು ಐಸಿಸಿ ಟ್ವೆಂಟಿ-20 ವಿಶ್ವಕಪ್ಗೆ 15 ಸದಸ್ಯರ ಬಳಗದ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಉಪನಾಯಕನ ಜವಬ್ದಾರಿ ನೀಡಲಾಗಿದೆ.
07:36 PM Apr 30, 2024 IST | Nisarga K
ಬೆಂಗಳೂರು: ಇಂದು ಐಸಿಸಿ ಟ್ವೆಂಟಿ-20 ವಿಶ್ವಕಪ್ಗೆ 15 ಸದಸ್ಯರ ಬಳಗದ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಉಪನಾಯಕನ ಜವಬ್ದಾರಿ ನೀಡಲಾಗಿದೆ.
Advertisement
ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಅವರು ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಾಗೂ ವಿಕೆಟ್ ಕೀಪರ್ಗಳಾದ ರಿಷಬ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಆಟಗಾರರು ಮಧ್ಯೆ ನಿಕಟ ಪೈಪೋಟಿ ಕಂಡುಬಂದಿತ್ತು. ಆದರೆ ಕರ್ನಾಟಕದ ಕೆ.ಎಲ್. ರಾಹುಲ್ ಸೇರಿದಂತೆ ಪ್ರಮುಖ ಆಟಗಾರರು ಅವಕಾಶ ವಂಚಿತರಾಗಿದ್ದಾರೆ. ಮತ್ತು ಕಿಶನ್ ಅವರನ್ನು ಕೂಡ ಕೈ ಬಿಡಲಾಗಿದೆ.
Advertisement
Advertisement