ಉಡುಪಿ ಪರ್ಯಾಯಕ್ಕೆ ಮಾರ್ಗಸೂಚಿ ರೂಪಿಸಲು ಸಲ್ಲಿಸಿದ್ದ ಅರ್ಜಿ ವಜಾ
ಉಡುಪಿ ಅಷ್ಠ ಮಠದ ಪರ್ಯಾಯಕ್ಕೆ ಮಾರ್ಗಸೂಚಿ ರೂಪಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೋಮವಾರ ಹೈಕೋರ್ಟ್ ವಜಾಗೊಳಿಸಿದೆ. ಪರ್ಯಾಯ ಮಹೋತ್ಸವಕ್ಕೆ ಮಾರ್ಗಸೂಚಿಗಳು/ಬೈಲಾ ರಚನೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.
06:17 PM Jan 08, 2024 IST
|
Ashitha S
ಬೆಂಗಳೂರು: ಉಡುಪಿ ಅಷ್ಠ ಮಠದ ಪರ್ಯಾಯಕ್ಕೆ ಮಾರ್ಗಸೂಚಿ ರೂಪಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೋಮವಾರ ಹೈಕೋರ್ಟ್ ವಜಾಗೊಳಿಸಿದೆ. ಪರ್ಯಾಯ ಮಹೋತ್ಸವಕ್ಕೆ ಮಾರ್ಗಸೂಚಿಗಳು/ಬೈಲಾ ರಚನೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.
Advertisement
ಇನ್ನು ಉಡುಪಿ ಮಠದ ಭಕ್ತರಾಗಿರುವ ಬೆಂಗಳೂರಿನ ಗುರುರಾಜ್ ಜೀವನ ರಾವ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.
Advertisement
Advertisement
Next Article