ಮತದಾನ ಮಾಡದವರು ಬದುಕಿದ್ದು ಸತ್ತಂತೆ : ಬ್ಯಾನರ್ ಹಾಕಿ ಆಕ್ರೋಶ
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಆದರೆ ಅಂತಹ ದೊಡ್ಡ ನಗರದಲ್ಲಿ ಮತದಾನ ಸಂಖ್ಯೆ ಪ್ರತಿ ಬಾರಿಯಂತೆ ಕಡಿಮೆ ಆಗಿದೆ.
02:40 PM Apr 27, 2024 IST
|
Nisarga K
ಬೆಂಗಳೂರು : ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಆದರೆ ಅಂತಹ ದೊಡ್ಡ ನಗರದಲ್ಲಿ ಮತದಾನ ಸಂಖ್ಯೆ ಪ್ರತಿ ಬಾರಿಯಂತೆ ಕಡಿಮೆ ಆಗಿದೆ.
Advertisement
ಇದರಿಂದ ಆಕ್ರೋಶಗೊಂಡ ಕೆಲವರು ಮತದಾನ ಮಾಡದವರು ಬದುಕಿದ್ದು ಸತ್ತಂತೆ ಅಂತ ರಸ್ತೆ ಬದಿಗಳಲ್ಲಿ ಬ್ಯಾನರ್ ಹಾಕಿದ್ದಾರೆ. “ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು” ಎಂದು ಬ್ಯಾನರ್ ಹಾಕಿದ್ದಾರೆ.
“ಪ್ರತಿ ಸಲದಂತೆ 2024ರ ಲೋಕಸಭಾ ಚುನಾವಣೆಯಲ್ಲೂ ವಲಸಿಗರು ಕೈ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮತದಾನ ಮಾಡುವ ಹಕ್ಕಿದ್ದರೂ ಮತ ಹಾಕಿಲ್ಲ. ಇವರು ಬದುಕಿದ್ದು ಸತ್ತಂತೆ” ಎಂದು ಹೆಸರು ಹೇಳಲು ಇಚ್ಚಿಸಿದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
Advertisement
Advertisement
Next Article