ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಪಲ್ಟಿ: 15ಕ್ಕೂ ಹೆಚ್ಚು ಜನರಿಗೆ ಗಾಯ
ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ.
08:43 PM Jan 07, 2024 IST
|
Ashika S
ಚಿಕ್ಕಮಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ.
Advertisement
ಬಸ್ ಜಯಪುರದಿಂದ ಗುಡ್ಡೆತೋಟದ ಮೂಲಕ ಹೊರನಾಡಿಗೆ ಹೋಗುವಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ.
ಮೈಸೂರು ಮೂಲದ ಬಸ್ಸಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ ಶಾರದಾಂಬೆ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟಿದ್ದರು.
ಬಸ್ಸಿನಲ್ಲಿ 34 ಜನ ಮಾಲಾಧಾರಿಗಳು ಪ್ರಯಾಣ ಮಾಡುತ್ತಿದ್ದರು. ಅವರಲ್ಲಿ 15 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
Next Article