ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪದ್ಮರಾಜ್ ಗೆ ಕಾಂಗ್ರೆಸ್ ಟಿಕೆಟ್: ಅಧಿಕೃತ ಘೋಷಣೆಗೂ ಮುನ್ನವೇ ಟೆಂಪಲ್ ರನ್

ನಗರದ  ಪ್ರಭಾವಿ ಬಿಲ್ಲವ ಮುಖಂಡ ಪದ್ಮರಾಜ್ ಅವರು ಕಾಂಗ್ರೆಸ್ ನಿಂದ ಲೋಕಸಭಾ ಕಣಕ್ಕೆ ಇಳಿಯುವುದು ಪಕ್ಕಾ ಆಗಿದೆ. ಆದರೆ ಅಧಿಕೃತ ಘೋಷಣೆವೊಂದೇ ಬಾಕಿಯಿದೆ. ಹೀಗಾಗಿ ಪದ್ಮರಾಜ್ ಅವರು ಅಧಿಕೃತ ಘೋಷಣೆಗೂ ಮುನ್ನವೇ ಟೆಂಪಲ್ ರನ್ ಮಾಡುತ್ತಿದ್ದಾರೆ.
01:16 PM Mar 20, 2024 IST | Nisarga K
ಪದ್ಮರಾಜ್ ಗೆ ಕಾಂಗ್ರೆಸ್ ಟಿಕೆಟ್: ಅಧಿಕೃತ ಘೋಷಣೆಗೂ ಮುನ್ನವೇ ಟೆಂಪಲ್ ರನ್

ಮಂಗಳೂರು: ನಗರದ  ಪ್ರಭಾವಿ ಬಿಲ್ಲವ ಮುಖಂಡ ಪದ್ಮರಾಜ್ ಅವರು ಕಾಂಗ್ರೆಸ್ ನಿಂದ ಲೋಕಸಭಾ ಕಣಕ್ಕೆ ಇಳಿಯುವುದು ಪಕ್ಕಾ ಆಗಿದೆ. ಆದರೆ ಅಧಿಕೃತ ಘೋಷಣೆವೊಂದೇ ಬಾಕಿಯಿದೆ. ಹೀಗಾಗಿ ಪದ್ಮರಾಜ್ ಅವರು ಅಧಿಕೃತ ಘೋಷಣೆಗೂ ಮುನ್ನವೇ ಟೆಂಪಲ್ ರನ್ ಮಾಡುತ್ತಿದ್ದಾರೆ.

Advertisement

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿಯೂ ಆಗಿರೋ ಪದ್ಮರಾಜ್ ಅವರು ಗೋಕರ್ಣನಾಥೇಶ್ವರ ದೇವಸ್ಥಾನ ಭೇಟಿ ನೀಡಿ ದೇವರ ದರ್ಶನ ಪಡೆದು ಗೋಕರ್ಣನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಟಿಕೆಟ್ ಫಿಕ್ಸ್ ಆದ ಹಿನ್ನೆಲೆಯಲ್ಲಿ ಪದ್ಮರಾಜ್ ಪೂಜೆ ಸಲ್ಲಿಸಿದ್ದಾರೆ. ಇವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾಗಿದರು.

Advertisement

ಇನ್ನು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಪರಮಾಪ್ತ ಪದ್ಮರಾಜ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದು ಬಿಲ್ಲವ ಸಮಾಜದ ಪ್ರಭಾವಿ ಮುಖಂಡ. ಕಳೆದ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಇವರು ಕಾಂಗ್ರೆಸ್ ಸೇರಿದ್ದರು. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗೆ ಯತ್ನಿಸಿ ವಿಫಲರಾಗಿದ್ದರು. ಇತ್ತ ಬಿಜೆಪಿಯಿಂದ ನಿವೃತ್ತ ಯೋಧ, ಸುಶಿಕ್ಷಿತ ಬ್ರಿಜೇಶ್ ಚೌಟ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ವೃತ್ತಿಯಲ್ಲಿ ವಕೀಲರಾಗಿರೋ ಪದ್ಮರಾಜ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಅಲ್ಲದೆ ಬಿಜೆಪಿಯ ಬಂಟ ಅಭ್ಯರ್ಥಿಗೆ ಪ್ರಭಾವಿ ಬಿಲ್ಲವ ಮುಖಂಡ‌ನ ಮೂಲಕ ಠಕ್ಕರ್ ಕೊಡಲು ಕಾಂಗ್ರೆಸ್ ಪ್ಲಾನ್‌ ಮಾಡಿದೆ.

Advertisement
Tags :
CongressELECTIONLatestNewsNewsKarnatakaPadmarajramaiyyaPOLITICStemplerunticket
Advertisement
Next Article