For the best experience, open
https://m.newskannada.com
on your mobile browser.
Advertisement

ಕರ್ನಾಟಕದ ಪದ್ಮಶ್ರೀ ಪುರಸ್ಕೃತರಿಗೂ ಅಯೋಧ್ಯೆಗೆ ಆಹ್ವಾನ

ಜ.೨೨ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಮತ್ತು ತುಳಸಿ ಗೌಡರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಪ್ರಾಂತ್ಯ ಪ್ರಚಾರಕರು ಆಹ್ವಾನ ಪತ್ರಿಕೆ ನೀಡಿದ್ದಾರೆ.
07:11 PM Jan 20, 2024 IST | Maithri S
ಕರ್ನಾಟಕದ ಪದ್ಮಶ್ರೀ ಪುರಸ್ಕೃತರಿಗೂ ಅಯೋಧ್ಯೆಗೆ ಆಹ್ವಾನ

ಕಾರವಾರ: ಜ.೨೨ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಮತ್ತು ತುಳಸಿ ಗೌಡರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಪ್ರಾಂತ್ಯ ಪ್ರಚಾರಕರು ಆಹ್ವಾನ ಪತ್ರಿಕೆ ನೀಡಿದ್ದಾರೆ.

Advertisement

ಅಂಕೋಲದ ಸುಕ್ರಿ ಬೊಮ್ಮಗೌಡ 5,000 ಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳನ್ನು ನೆನಪಿಟ್ಟುಕೊಂಡು ಹಾಡುವರು. ಇವರ ಈ ಸಾಧನೆಗೆ ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಸಾವಿರಾರು ಮರಗಳನ್ನು ಬೆಳೆಸಿ ವೃಕ್ಷಮಾತೆ ಎಂದೇ ಹೆಸರಾಗಿರುವ ತುಳಸಿ ಗೌಡ ತಮ್ಮ ಪರಿಸರ ಪ್ರೇಮಕ್ಕೆ ಪ್ರಸಿದ್ಧರು.

Advertisement

Advertisement
Tags :
Advertisement