ಪಾಕಿಸ್ತಾನದ ಪರ ಘೋಷಣೆ: ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ
ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ವಿಧಾನಸೌಧದ ಲಾಂಜ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.
07:01 AM Feb 28, 2024 IST
|
Ashika S
ಬೆಂಗಳೂರು: ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ವಿಧಾನಸೌಧದ ಲಾಂಜ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.
Advertisement
ಈ ವೇಳೆ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ತುಂಬಿಸಿ ಕರೆದೊಯ್ದಿದು, ಮೈಸೂರು ರಸ್ತೆ ಸಿಎಆರ್ ಮೈದಾನದಲ್ಲಿ ಕೂಡಿ ಇಡಲಾಗಿತ್ತು.
Advertisement
ಇದರಿಂದ ರೊಚ್ಚಿಗೆದ್ದ ಬಿಜೆಪಿ ನಾಯಕರು ಸಿಎಆರ್ ಮೈದಾನದಲ್ಲೇ ಕೂತು ಪ್ರತಿಭಟನೆ ಮುಂದುವರಿಸಿದರು. ನಮ್ಮನ್ನು ಕತ್ತಲೆಯಲ್ಲಿ ತಂದು ಕೂರಿಸಿದ್ದಾರೆಂದು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
Advertisement
Next Article