ಪಣಂಬೂರು ಬೀಚ್ನಲ್ಲಿ ನೀರುಪಾಲಾದ ಮೂವರು ಯುವಕರು
ಮಂಗಳೂರಿನ ಹೊರವಲಯದ ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ.
09:50 PM Mar 03, 2024 IST | Gayathri SG
ಮಂಗಳೂರು: ಮಂಗಳೂರಿನ ಹೊರವಲಯದ ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ.
Advertisement
ಮೃತರನ್ನು ಮಿಲನ್(20), ಲಿಖಿತ್(18), ನಾಗರಾಜ್(24) ಎಂದು ತಿಳಿದುಬಂದಿದೆ. ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ , ಲಿಖಿತ್ ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗೂ ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್ವೈಸರ್ ಆಗಿದ್ದ ಎನ್ನಲಾಗಿದೆ.
ಶೋಧ ಕಾರ್ಯ ನಡೆಯುತ್ತಿದ್ದು, ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement