ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಮಾನದಲ್ಲಿ ಕಳೆದುಕೊಂಡ ವಾಲೆಟ್ ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕನ ಬಂಧನ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ತಮ್ಮ ವಾಲೆಟ್ ಕಳೆದುಕೊಂಡಿದ್ದು,  ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ದೂರು ನೀಡಿದ್ದರು ಪ್ರಯೋಜನವಾಗದೇ ಆಕ್ರೋಶಗೊಂಡ ಪ್ರಯಾಣಿಕ ತನ್ನ ವಾಲೆಟ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ವಿಚಿತ್ರ ಘಟನೆ  ನಡೆದಿದೆ. 
01:20 PM Dec 28, 2023 IST | Ashika S

ಬೆಂಗಳೂರು:  ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ತಮ್ಮ ವಾಲೆಟ್ ಕಳೆದುಕೊಂಡಿದ್ದು,  ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ದೂರು ನೀಡಿದ್ದರು ಪ್ರಯೋಜನವಾಗದೇ ಆಕ್ರೋಶಗೊಂಡ ಪ್ರಯಾಣಿಕ ತನ್ನ ವಾಲೆಟ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ವಿಚಿತ್ರ ಘಟನೆ  ನಡೆದಿದೆ.

Advertisement

ಪ್ರಯಾಣಿಕ ಶ್ರೇಯಾಂಶ್ ಚಮಾರಿಯಾ ಅವರು ತಮ್ಮ ವ್ಯಾಲೆಟ್‌ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ್ದರು. ಹೀಗಾಗಿ ನಿನ್ನೆ ಅವರನ್ನು ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 26 ರಂದು ಬೆಳಗ್ಗೆ 9.20 ಕ್ಕೆ ಚಮರಿಯಾ ಎಸ್‌ಜಿ 8536 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ತಮ್ಮ ವಾಲೆಟ್ ಕಾಣೆಯಾಗಿದೆ ಎಂದು ಅರಿತ ಅವರು ಗುರುಗ್ರಾಮ್‌ನಲ್ಲಿರುವ ಸ್ಪೈಸ್‌ಜೆಟ್ ಕಾಲ್ ಸೆಂಟರ್‌ಗೆ ಬೆಳಗ್ಗೆ 10.16ಕ್ಕೆ ಕರೆ ಮಾಡಿದ್ದಾರೆ. "ಕರೆಗೆ ಉತ್ತರಿಸಿದ ವ್ಯಕ್ತಿ ಅವರಿಗೆ ಎಂದಿನಂತೆ ಪ್ರಶ್ನೆಗಳನ್ನು ಕೇಳಿದ್ದಾರೆ ಮತ್ತು ಕಾಲ್ ಅನ್ನು ಹೊಲ್ಡ್ ಮಾಡಿದ್ದಾರೆ. ತನ್ನ ಕರೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ವಾಲೆಟ್ ಮರಳಿ ಪಡೆಯಲು ಸಾಧ್ಯವಾಗದೆ ಹತಾಶನಾಗಿ, ಅದರಲ್ಲಿ ಬಾಂಬ್ ಇದೆ ಮತ್ತು ಅದನ್ನು ತಕ್ಷಣವೇ ಪತ್ತೆ ಮಾಡುವಂತೆ ಕೇಳಿಕೊಂಡಿದ್ದಾನೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಕಾಲ್ ಸೆಂಟರ್ ಸಿಬ್ಬಂದಿ ಬಾಂಬ್ ಇರುವ ಸ್ಥಳವನ್ನು ಕೇಳಿದಾಗ, ಪ್ರಯಾಣಿಕ ಚಮಾರಿಯಾ, ಹಿಂದಿಯಲ್ಲಿ ಉತ್ತರಿಸಿ, “ನಾನು ನಿಮಗೆ ಹೇಳುವುದಿಲ್ಲ. ಅದು ಯಾವಾಗ ಬೇಕಾದಾರೂ ಸ್ಫೋಟವಾಗಬಹುದು” ಎಂದು ಹೇಳಿದ್ದಾನೆ. ತಕ್ಷಣ ಸ್ಪೈಸ್ ಜೆಟ್ ಅಧಿಕಾರಿಗಳು ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಸ್ಪೈಸ್ ಜೆಟ್ ಸಿಬ್ಬಂದಿ ಬೆಳಗ್ಗೆ 10.59 ಕ್ಕೆ ವಿಮಾನದೊಳಗೆ ವಾಲೆಟ್ ಅನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಾಹಿತಿ ನೀಡಿದ್ದು, ಅವರು ವಿಶೇಷ ಬಾಂಬ್ ಪತ್ತೆ ತಂಡವನ್ನು ಕರೆಯಿಸಿ ಪರಿಶೀಲಿಸಿ, ಹುಸಿ ಬಾಂಬ್ ಕರೆ ಎಂದು ಹೇಳಿದ್ದಾರೆ.

Advertisement
Tags :
LatetsNewsNewsKannadaಆಕ್ರೋಶಕಾಲ್ದೆಹಲಿಬಾಂಬ್‌ವಾಲೆಟ್ವಿಮಾನ
Advertisement
Next Article