ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗ
ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗಗೊಂಡಿದೆ.
07:28 PM Jan 24, 2024 IST
|
Ashika S
ಬೆಂಗಳೂರು: ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗಗೊಂಡಿದೆ.
Advertisement
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ನಂತರ ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ ಕೆತ್ತಿರುವ ಮೂರ್ತಿಯ ಫೋಟೋವನ್ನು ನಿನ್ನೆ ಬಹಿರಂಗಪಡಿಸಲಾಗಿತ್ತು.
ಇದೀಗ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತಿರುವ ರಾಮ ಲಲ್ಲಾ ಮೂರನೇ ಮೂರ್ತಿಯ ಫೋಟೋವನ್ನು ಇದೀಗ ಬಹಿರಂಗಪಡಿಸಲಾಗಿದೆ.
Advertisement
ಗಣೇಶ್ ಭಟ್ ಅವರು ಕೃಷ್ಣ ಶಿಲೆಯಲ್ಲೇ ಮೂರ್ತಿಯನ್ನು ಕೆತ್ತಿದ್ದಾರೆ. ಇದರಲ್ಲಿ, ಭಗವಾನ್ ರಾಮನ ಪಾದದ ಒಂದು ಬದಿಯಲ್ಲಿ ಹನುಮಂತನನ್ನು ಇನ್ನೊಂದು ಬದಿಯಲ್ಲಿ ಗರುಡನನ್ನು ಕೆತ್ತಲಾಗಿದೆ.
ನಿನ್ನೆ ಒಂದೇ ದಿನ ಐದು ಲಕ್ಷಕ್ಕೂ ಹೆಚ್ಚು ಭಕ್ತರು ದೇವರ ದರ್ಶನವನ್ನು ಪಡೆದಿದ್ದಾರೆ. ದೇವರ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.
Advertisement
Next Article