ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಗರಸಭೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಪ್ಲಾಸ್ಟಿಕ್ ವ್ಯಾಪಾರಿಗಳು

ನಗರಸಭೆ ಅಧಿಕಾರಿಗಳ ಮೇಲೆ ಪ್ಲಾಸ್ಟಿಕ್‌ ವ್ಯಾಪಾರಿಗಳು ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ನಗರದ ಮೀನು ಮಾರುಕಟ್ಟೆ ಬಳಿ ನಡೆದಿದೆ.
04:17 PM Mar 02, 2024 IST | Ashika S

ಉಡುಪಿ: ನಗರಸಭೆ ಅಧಿಕಾರಿಗಳ ಮೇಲೆ ಪ್ಲಾಸ್ಟಿಕ್‌ ವ್ಯಾಪಾರಿಗಳು ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ನಗರದ ಮೀನು ಮಾರುಕಟ್ಟೆ ಬಳಿ ನಡೆದಿದೆ.

Advertisement

ವ್ಯಾಪಾರಿಗಳು ಓಮ್ಮಿ ಕಾರಿನಲ್ಲಿ ಪ್ಲಾಸ್ಟಿಕ್ ಕವರ್ ತುಂಬಿಕೊಂಡು ಮಾರಾಟಕ್ಕೆಂದು ಬಂದಿದ್ದರು. ಈ ಮಾಹಿತಿ ಆಧರಿಸಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಧಿಕಾರಿಗಳಾದ ಸುರೇಂದ್ರ ಮತ್ತು ಮನೋಜ್ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

Advertisement

ಪ್ಲಾಸ್ಟಿಕ್ ಕವರ್‌ಗಳನ್ನು ಮೀನುಗಾರರಿಗೆ ಮಾರಾಟ ಮಾಡುತ್ತಿದ್ದಾಗ ಅಧಿಕಾರಿಗಳು ಪ್ಲಾಸ್ಟಿಕ್ ಕವರ್ ವಶಪಡಿಸಲು ಮುಂದಾಗುತ್ತಿದ್ದಂತೆ ಹಲ್ಲೆಗೆ ಯತ್ನಿಸಲಾಗಿದೆ.  ವಿಷಯ ಅರಿತು ಸ್ಥಳಕ್ಕೆ ನಗರಸಭೆ ಕಮೀಷನರ್‌ ರಾಯಪ್ಪ ಮತ್ತು ಪೊಲೀಸರು ದೌಡಾಯಿಸಿದ್ದಾರೆ. ಬಳಿಕ ಉಡುಪಿ ನಗರ ಠಾಣೆಗೆ ವ್ಯಾಪಾರಿಗಳನ್ನು ಕರೆದೊಯ್ದು ರಾಜಿ ಮೂಲಕ ಪ್ರಕರಣ ಇತ್ಯರ್ಥಗೊಳಿಸಿದ್ದಾರೆ.

Advertisement
Tags :
LatetsNewsNewsKannadaಅಧಿಕಾರಿಪ್ಲಾಸ್ಟಿಕ್‌ ವ್ಯಾಪಾರಿಮೀನು ಮಾರುಕಟ್ಟೆ
Advertisement
Next Article