ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಮಿಳುನಾಡಿನಲ್ಲಿ ಭೀಕರ ಅಪಘಾತ  : ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐವರು ಪೊಲೀಸ್‌ ಅಧಿಕಾರಿಗಳು ಹೋಗುತ್ತಿದ್ದ ಜೀಪ್‌ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಬಸ್‌ಗೆ ಡಿಕ್ಕಿಯಾದ ಪರಿಣಾಮ ಕರ್ನಾಟಕದ ಅಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ.
09:29 PM Apr 11, 2024 IST | Nisarga K
ತಮಿಳುನಾಡಿನಲ್ಲಿ ಭೀಕರ ಅಪಘಾತ  : ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐವರು ಪೊಲೀಸ್‌ ಅಧಿಕಾರಿಗಳು ಹೋಗುತ್ತಿದ್ದ ಜೀಪ್‌ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಬಸ್‌ಗೆ ಡಿಕ್ಕಿಯಾದ ಪರಿಣಾಮ ಕರ್ನಾಟಕದ ಅಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ.

Advertisement

ಈ ಅಪಘಾತದಲ್ಲಿ ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗಿದ್ದ ಪೊಲೀಸ್ ಅಧಿಕಾರಿ, ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ.ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಬ್ಬರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗುವುದು. ಮೃತಪಟ್ಟಿರುವ ಬಗ್ಗೆ ಪ್ರಭಾಕರ್ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಸ್ ಮತ್ತು ಜೀಪ್‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಜೀಪ್‌ ಛಿದ್ರವಾಗಿದ್ದು, ಬಸ್‌ನ ಮುಂಭಾಗ ಸಹ ದೊಡ್ಡ ಪ್ರಮಾಣದಲ್ಲಿ ಜಖಂ ಆಗಿದೆ. ಸಂಜೆ ನಾಲ್ಕು ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

Advertisement

Advertisement
Tags :
ACCIDENTdeathKARNATAKALatestNewsNewsKarnatakaPOLICEPolice jeepTAMILNAD
Advertisement
Next Article