For the best experience, open
https://m.newskannada.com
on your mobile browser.
Advertisement

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ನಡೆಯನ್ನು ಬಿಜೆಪಿ ಪ್ರಶ್ನಿಸಿದ್ದು, ಶಾಸಕರಿಗೆ ಮಾತೃಪಕ್ಷದ ಮೇಲೆ ಮತ್ತೆ ಒಲವು ಹೆಚ್ಚಾಗಿದೆ ಎಂದು ಬಿಜೆಪಿ ಪಕ್ಷ ಹೇಳಿದೆ.
12:22 PM May 18, 2024 IST | Chaitra Kulal
ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ನಡೆಯನ್ನು ಬಿಜೆಪಿ ಪ್ರಶ್ನಿಸಿದ್ದು, ಶಾಸಕರಿಗೆ ಮಾತೃಪಕ್ಷದ ಮೇಲೆ ಮತ್ತೆ ಒಲವು ಹೆಚ್ಚಾಗಿದೆ ಎಂದು ಬಿಜೆಪಿ ಪಕ್ಷ ಹೇಳಿದೆ.

Advertisement

ಶಾಸಕರು ಮತ್ತೆ ಬಿಜೆಪಿಗೆ ಬರುವುದಾದರೆ ಸ್ವಾಗತ ಎಂದು ಬಿಜೆಪಿ ಮುಖಂಡ ಹೇಳಿದ್ದು, ಬಿಜೆಪಿ ಹೇಳಿಕೆಗೆ ಶಾಸಕರ ಆಪ್ತರಿಂದ ಬಿಜೆಪಿ ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ರೌಡಿಶೀಟರ್ ಪ್ರಜ್ವಲ್ ರೈ ಎಂಬಾತನಿಂತ ಅವಮಾನಕಾರಿ ಪೋಸ್ಟ್ ಹಾಕಲಾಗಿದೆ.

Advertisement

ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಅವಮಾನಕಾರಿ ಪೋಸ್ಟ್ ಹಾಕಿದ ಶಾಸಕರ ಆಪ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಹೇರಲಾಗಿದೆ. ಅವಮಾನಕಾರಿ ಪೋಸ್ಟ್ ಹಾಕಿದ ಪ್ರಜ್ವಲ್ ರೈ ಬಂಧಿಸುವಂತೆ ಬಿಜೆಪಿ ಮುಖಂಡರು ಮನವಿ ಸಲ್ಲಿಸಿದ್ದಾರೆ. ತಪ್ಪಿದಲ್ಲಿ ತಕ್ಕ ಉತ್ತರ ನೀಡಲು ಬಿಜೆಪಿಗೆ ತಿಳಿದಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಎಚ್ಚರಿಸಿದ್ದಾರೆ.

Advertisement
Tags :
Advertisement