ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಮಳೆ: ಹವಮಾನ ಇಲಾಖೆ

ರಾಜ್ಯದಲ್ಲಿ 18ನೇ ಏಪ್ರಿಲ್ ಅಂದ್ರೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಸಾಧಾರಣ ಮಳೆಯ ಜೊತೆಗೆ ಗುಡುಗು ಮಿಂಚಿನ ವಾತಾವರಣ ಕಂಡು ಬರುವ ಮುನ್ಸೂಚನೆಯನ್ನು  ಹವಮಾನ ಇಲಾಖೆ ನೀಡಿದೆ. 
02:49 PM Apr 18, 2024 IST | Ashika S

ಬೆಂಗಳೂರು: ರಾಜ್ಯದಲ್ಲಿ 18ನೇ ಏಪ್ರಿಲ್ ಅಂದ್ರೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಸಾಧಾರಣ ಮಳೆಯ ಜೊತೆಗೆ ಗುಡುಗು ಮಿಂಚಿನ ವಾತಾವರಣ ಕಂಡು ಬರುವ ಮುನ್ಸೂಚನೆಯನ್ನು  ಹವಮಾನ ಇಲಾಖೆ ನೀಡಿದೆ.

Advertisement

ಹವಮಾನ ಇಲಾಖೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಮತ್ತೆ ರಾಜ್ಯದಲ್ಲಿ ಮಳೆರಾಯ  ದರ್ಶನ ಕೊಡುವ ಮುನ್ಸೂಚನೆ ಸಿಕ್ಕಿದೆ.

ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 18ರಿಂದ 22ವರೆಗೆ ಸಾಧಾರಣ ಮಳೆಯಾಗಲಿದೆ. ಅದರಲ್ಲೂ ಏಪ್ರಿಲ್ 21ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.

Advertisement

ಇಂದು ಹಾಸನ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬೆಳಗಾವಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Advertisement
Tags :
bengaluruLatetsNewsNewsKarnatakaRAINFALLSTATE
Advertisement
Next Article