For the best experience, open
https://m.newskannada.com
on your mobile browser.
Advertisement

ವರನಟ ಡಾ.ರಾಜ್ ಪುತ್ಥಳಿ ಕೆಡವಿದ ಬಿಬಿಎಂಪಿ!

ಗರದ ಚಿಕ್ಕಪೇಟೆಯಲ್ಲಿ ಅಭಿಮಾನಿಗಳು ನಿರ್ಮಿಸಿದ್ದ ಡಾ.ರಾಜ್ ಕುಮಾರ್ ಪುತ್ಥಳಿಯನ್ನು ಬಿಬಿಎಂಪಿ ಕೆಡವಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
10:26 AM Mar 20, 2024 IST | Ashitha S
ವರನಟ ಡಾ ರಾಜ್ ಪುತ್ಥಳಿ ಕೆಡವಿದ ಬಿಬಿಎಂಪಿ

ಬೆಂಗಳೂರು : ನಗರದ ಚಿಕ್ಕಪೇಟೆಯಲ್ಲಿ ಅಭಿಮಾನಿಗಳು ನಿರ್ಮಿಸಿದ್ದ ಡಾ.ರಾಜ್ ಕುಮಾರ್ ಪುತ್ಥಳಿಯನ್ನು ಬಿಬಿಎಂಪಿ ಕೆಡವಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ನಟ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಹಿನ್ನೆಲೆ ಚಿಕ್ಕಪೇಟೆಯಲ್ಲಿ ವರನಟ ಡಾ.ರಾಜ್ ಕುಮಾರ್ ಪುತ್ಹಳಿಯನ್ನು ಸ್ಥಾಪಿಸಲಾಗಿತ್ತು, ಆದರೆ ಬಿಬಿಎಂಪಿ ಅದನ್ನು ಜೆಸಿಬಿ ಮೂಲಕ ಪುತ್ಹಳಿ ನಿಲ್ಲಿಸಲು ನಿರ್ಮಿಸಿದ್ದ ಕಟ್ಟೆಯನ್ನು ಒಡೆದಯ ಹಾಕಿದೆ ಎನ್ನಲಾಗಿದೆ.

ಘಟನೆ ಖಂಡಿಸಿ ಅಭಿಮಾನಿಗಳು, ಹೋರಾಟಗಾರರು ಚಿಕ್ಕಪೇಟೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅನುಮತಿ ಪಡೆಯದೇ ಸಾರ್ವಜನಿಕ ಸ್ಥಳದಲ್ಲಿ ಪುತ್ಹಳಿಯನ್ನು ನಿರ್ಮಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

Advertisement

ಪ್ರತಿಮೆ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರರಿಂದ ಇಂದು ಚಿಕ್ಕಪೇಟೆಯಲ್ಲಿ ಪ್ರತಿಭಟನೆ ನಡೆಯಲಿದೆ. “ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪುತ್ಥಳಿ ಸ್ಥಾಪಿಸಲಾಗಿತ್ತು. ಇದನ್ನು ತೆರವು ಮಾಡಿರುವುದು ಅನ್ಯಾಯ. ಇದು ಕನ್ನಡಿಗರನ್ನು ಕೆರಳಿಸುವ ಘಟನೆ. ಇದನ್ನು ವಿರೋಧಿಸಿ ಇಂದು ಪ್ರತಿಭಟನೆ ಮಾಡಲಿದ್ದೇವೆ” ಎಂದು ನಮ್ಮ ಕರ್ನಾಟಕ ಸೇನೆಯ ಯುವಘಟಕದ ಅಧ್ಯಕ್ಷರು ತಿಳಿಸಿದ್ದಾರೆ.

Advertisement
Tags :
Advertisement