ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್ ಸ್ಪೋಟ: ತೇಜಸ್ವಿ ಸೂರ್ಯ
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್ ಸ್ಪೋಟ ಯಾವುದೇ ಸಿಲಿಂಡರ್ ಸ್ಫೋಟವಲ್ಲ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
05:41 PM Mar 01, 2024 IST
|
Ashika S
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್ ಸ್ಪೋಟ ಯಾವುದೇ ಸಿಲಿಂಡರ್ ಸ್ಫೋಟವಲ್ಲ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
Advertisement
ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಸೋಷಿಯಲ್ ಮೀಡಿಯಾ Xನಲ್ಲಿ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್ ಸ್ಫೋಟ ಅನ್ನೋದು ಮೇಲ್ನೋಟಕ್ಕೆ ಸಾಬೀತಾಗಿದೆ. ರಾಮೇಶ್ವರಂ ಕೆಫೆ ಮಾಲೀಕ ಶ್ರೀ ನಾಗರಾಜ್ ಅವರ ಜೊತೆಗೆ ಘಟನೆಯ ಬಗ್ಗೆ ಮಾತನಾಡಿದ್ದೇನೆ.
ಗ್ರಾಹಕರೊಬ್ಬರು ಬಿಟ್ಟು ಹೋದ ಬ್ಯಾಗ್ನಿಂದ ಸ್ಫೋಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕೆಫೆಯಲ್ಲಿ ಯಾವುದೇ ಸಿಲಿಂಡರ್ ಸ್ಫೋಟವಾಗಿಲ್ಲ. ಘಟನೆಯಲ್ಲಿ ರಾಮೇಶ್ವರಂ ಕೆಫೆಯ ಸಿಬ್ಬಂದಿ ಗಾಯಗೊಂಡಿದ್ದಾರೆ.
Advertisement
ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗರಿಗೆ ಉತ್ತರ ಕೊಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.
Advertisement
Next Article