ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗುರುತೇ ಸಿಗದಷ್ಟು ಬದಲಾದ ನಟ ರಣದೀಪ್ ಹೂಡಾ: ಶಹಭಾಷ್ ಎಂದ ನೆಟ್ಟಿಗರು

'ಸ್ವಾತಂತ್ರ್ಯ ವೀರ ಸಾವರ್ಕರ್​' ಸಿನಿಮಾ ಪ್ರಮೋಷನ್​ನಲ್ಲಿ ನಟ ರಣದೀಪ್​ ಹೂಡಾ ಬ್ಯುಸಿ ಆಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ವಿನಾಯಕ್​ ದಾಮೋದರ್​ ಸಾವರ್ಕರ್‌ಅವರ ಬದುಕಿನ ವಿವರವನ್ನು ಆಧರಿಸಿ ತಯಾರಾದ ಸಿನಿಮಾ.
10:29 AM Mar 19, 2024 IST | Ashitha S

'ಸ್ವಾತಂತ್ರ್ಯ ವೀರ ಸಾವರ್ಕರ್​' ಸಿನಿಮಾ ಪ್ರಮೋಷನ್​ನಲ್ಲಿ ನಟ ರಣದೀಪ್​ ಹೂಡಾ ಬ್ಯುಸಿ ಆಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ವಿನಾಯಕ್​ ದಾಮೋದರ್​ ಸಾವರ್ಕರ್‌ಅವರ ಬದುಕಿನ ವಿವರವನ್ನು ಆಧರಿಸಿ ತಯಾರಾದ ಸಿನಿಮಾ.

Advertisement

ಸಿನಿಮಾದಲ್ಲಿ ಸಾವರ್ಕರ್​ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಂಡಿದ್ದು, ಪಾತ್ರದ ಮೇಲಿನ ಗೌರವ ಹಾಗೂ ಬದ್ಧತೆಗಾಗಿ ರಣದೀಪ್​ ಹೂಡಾ ಅಚ್ಚರಿಯ ರೀತಿಯಲ್ಲಿ ಬಾಡಿ ಟ್ರಾನ್ಸ್​ಫಾರ್ಮೇಷನ್​ ಮಾಡಿಕೊಂಡಿದ್ದಾರೆ.

'ಸ್ವಾತಂತ್ರ್ಯ ವೀರ ಸಾವರ್ಕರ್​' ಸಿನಿಮಾ ಮಾರ್ಚ್​ 22ರಂದು ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಇರುವಾಗ ರಣದೀಪ್ ಹೂಡಾ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಹೂಡಾ ಹಂಚಿಕೊಂಡಿರುವ ಫೋಟೋದಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ.

Advertisement

ಕಟ್ಟುಮಸ್ತಾದ ಬಾಡಿ ಹೊಂದಿದ್ದ ರಣದೀಪ್​ ಹೂಡಾ ಅವರು ಸಾವರ್ಕರ್​ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ. ಅಂದಾಜು 30 ಕೆಜಿ ದೇಹದ ತೂಕವನ್ನು ಅವರು ಕಡಿಮೆ ಮಾಡಿಕೊಂಡಿದ್ದು, ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಬದಲಾಗಿದ್ದಾರೆ. ಇವರಿಗೆ ಸಿನಿಮಾದ ಮೇಲಿನ ಪ್ರೀತಿ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ರಣದೀಪ್​ ಹೂಡಾ ನಟನೆಯ 'ಸ್ವಾತಂತ್ರ್ಯ ವೀರ ಸಾವರ್ಕರ್​' ಚಿತ್ರ ಮಾರ್ಚ್ 22ರಂದು ತೆರೆಗೆ ಬರ್ತಿದ್ದು ನಟಿ ಅಂಕಿತಾ ಲೋಖಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತುಂಬಾ ಸ್ಲಿಮ್​ ಆಗಿ ಕಾಣ್ತಿರುವ ರಣದೀಪ್ ಹೂಡಾ, ಶಾರ್ಟ್ಸ್ ತೊಟ್ಟಿದ್ದಾರೆ. ಈ ಫೋಟೋವನ್ನು ಹಂಚಿಕೊಂಡ ರಣದೀಪ್, “ಕಾಲಾ ಪಾನಿ” ಎಂದು ಬರೆದಿದ್ದಾರೆ. ರಣದೀಪ್ ಸೆಲ್ಯುಲಾರ್ ಜೈಲ್ ದೃಶ್ಯದ ಚಿತ್ರೀಕರಣದ ಸಮಯದಲ್ಲಿ ಈ ಫೋಟೋ ತೆಗೆಯಲಾಗಿದೆ ಎನ್ನಲಾಗ್ತಿದೆ.

https://www.facebook.com/photo.php?fbid=1010276120454417&set=a.290792479069455&type=3&ref=embed_post

ಇನ್ನು ಚಿತ್ರವು ಇತಿಹಾಸವನ್ನು ಹೊಸ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಮಾಡುತ್ತದೆ ಎಂದು ರಂಜಿತ್ ಸಾವರ್ಕರ್ ಹೇಳಿದ್ರು. ರಣದೀಪ್ ಹೂಡಾ ಅವರು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ ಮಾತ್ರವಲ್ಲದೆ ಅವರೇ ಚಿತ್ರವನ್ನು ನಿರ್ದೇಶಿಸಿದ್ದಾರೆ . ನಿರ್ದೇಶಕರಾಗಿ ಇದು ಅವರ ಮೊದಲ ಚಿತ್ರ. ರಣದೀಪ್ ಹೂಡಾ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರವನ್ನು ತಾವೇ ನಿರ್ಮಿಸಿದ್ದಾರೆ.

Advertisement
Tags :
indiaKARNATAKANewsKannadarandeephoodaSwatantrya Veer SavarkarVEER SAVARKAR
Advertisement
Next Article