ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ
ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
01:02 PM May 08, 2024 IST | Nisarga K
ಬೆಂಗಳೂರು: ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
Advertisement
ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್ ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬಳಿಕ ರಕ್ತಸ್ರಾವವಾಗಿ ಕಾರ್ತಿಕೇಯನ್ ರಸ್ತೆಯಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ತಿಕೇಯನ್ ಮೇಲೆ ಹಲವು ವರ್ಷಗಳಿಂದ ರೌಡಿಶೀಟರ್ ಇತ್ತು. ಇತ್ತೀಚೆಗಷ್ಟೆ ರೌಡಿಶೀಟರ್ ಕ್ಲೋಸ್ ಮಾಡಿಸಿಕೊಂಡಿದ್ದ. ಇತ್ತ ವಿವಾದಿತ ಜಾಗಗಳಿಗೆ ಬೇಲಿ ಹಾಕುತ್ತಾ ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿಕೊಂಡಿದ್ದ ಎನ್ನಲಾಗಿದೆ.
Advertisement
Advertisement