For the best experience, open
https://m.newskannada.com
on your mobile browser.
Advertisement

15 ಕೋಟಿ ರೂ. ವಂಚನೆ ಆರೋಪ : ಕೋರ್ಟ್​ ಮೆಟ್ಟಿಲೇರಿದ್ದ ಎಂಎಸ್ ಧೋನಿ

15 ಕೋಟಿ ಲಾಸ್ ಆಗಿದೆ ಎಂದು ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇದೀಗ ಕೋರ್ಟ್​ ಮೆಟ್ಟಿಲೇರಿದ್ದಾರೆ.
03:50 PM Jan 05, 2024 IST | Ramya Bolantoor
15 ಕೋಟಿ ರೂ  ವಂಚನೆ ಆರೋಪ   ಕೋರ್ಟ್​ ಮೆಟ್ಟಿಲೇರಿದ್ದ ಎಂಎಸ್ ಧೋನಿ

ಮುಂಬೈ: 15 ಕೋಟಿ ಲಾಸ್ ಆಗಿದೆ ಎಂದು ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇದೀಗ ಕೋರ್ಟ್​ ಮೆಟ್ಟಿಲೇರಿದ್ದಾರೆ.

Advertisement

ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮಿಹಿರ್ ದಿವಾಕರ್ ಮತ್ತು ಸೌಮ್ಯ ವಿಶ್ವಶ್ ವಿರುದ್ಧ ರಾಂಚಿ ಕೋರ್ಟ್​ನಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. 2017ರಲ್ಲಿ ದಿವಾಕರ್ ಧೋನಿಯೊಂದಿಗೆ ಜಾಗತಿಕವಾಗಿ ಕ್ರಿಕೆಟ್ ಅಕಾಡೆಮಿ ಸ್ಥಾಪಿಸಲು ಒಪ್ಪಂದ ಮಾಡಿಕೊಂಡಿದ್ದರು. ಆದರೆ ದಿವಾಕರ್ ಒಪ್ಪಂದದಲ್ಲಿ ವಿವರಿಸಿರುವ ಷರತ್ತುಗಳನ್ನು ಪಾಲಿಸಲು ವಿಫಲರಾಗಿದ್ದಾರೆ ಎಂದು ಧೋನಿ ಆರೋಪಿಸಿದ್ದಾರೆ.

ಅರ್ಕಾ ಸ್ಪೋರ್ಟ್ಸ್ ಫ್ರಾಂಚೈಸಿ ಒಪ್ಪಂದದ ಪ್ರಕಾರ ಲಾಭವನ್ನು ಹಂಚಿಕೊಳ್ಳಲು ಬದ್ಧವಾಗಿದೆ ಎಂದು ಹೇಳಿತ್ತು. ಒಪ್ಪಂದದಲ್ಲಿ ತಿಳಿಸಿರುವ ನಿಯಮಗಳು ಮತ್ತು ಷರತ್ತುಗಳನ್ನು ಕಡೆಗಣಿಸಲಾಗಿದೆ. ಹೀಗಾಗಿ ಧೋನಿ ಅವರು ಆಗಸ್ಟ್ 15, 2021ರಲ್ಲಿ ಆರ್ಕಾ ಸ್ಪೋರ್ಟ್ಸ್‌ಗೆ ನೀಡಿದ್ದ ಅಧಿಕಾರ ಪತ್ರವನ್ನು ಹಿಂತೆಗೆದುಕೊಂಡಿದ್ದರು. ನಂತರ ಧೋನಿ ಲೀಗಲ್ ನೋಟಿಸ್ ಕಳುಹಿಸಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ.

Advertisement

Advertisement
Tags :
Advertisement