ಪ್ರತಿ ಟಿಕೆಟ್ನ 5 ರೂಪಾಯಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ‘ಹನುಮಾನ್' ಚಿತ್ರತಂಡ
ಬೆಂಗಳೂರು: ಪೌರಾಣಿಕ ಹಾಗೂ ಆಧುನಿಕ ಕಥೆಗಳ ಸಮ್ಮಿಶ್ರಣದಲ್ಲಿ ಮೂಡಿ ಬರಲಿರುವ ‘ಹನುಮಾನ್’ ಚಿತ್ರದ ಪ್ರತಿ ಟಿಕೆಟ್ನ ಐದು ರೂಪಾಯಿಯನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ತಂಡ ಮುಂದಾಗಿದೆ.
ಪ್ರಶಾಂತ್ ವರ್ಮ ಅವರು ನಿರ್ದೇಶನ ಮಾಡುತ್ತಿರುವ, ತೇಜ್ ಸಜ್ಜಾ ಅವರು ನಟಿಸುತ್ತಿರುವ ತೆಲುಗಿನ ‘ಹನುಮಾನ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಈ ಚಿತ್ರ ಜನವರಿ 12ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.
ಹನುಮಂತನ ಪಾತ್ರವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಕಥೆಗೆ ಆಧುನಿಕ ಟಚ್ ನೀಡಿ ‘ಹನುಮಾನ್’ ಸಿನಿಮಾ ಮಾಡಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ.
ವಿನಯ್ ರಾಯ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅಮೃತಾ ಅಯ್ಯರ್, ವರಲಕ್ಷ್ಮೀ ಶರತ್ಕುಮಾರ್, ರಾಜ್ ದೀಪಕ್ ಶೆಟ್ಟಿ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು ಮಾತ್ರವಲ್ಲದೆ ಕನ್ನಡ ಮೊದಲಾದ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.
ಜನವರಿ 7ರಂದು ಅದ್ದೂರಿಯಾಗಿ ‘ಹನುಮಾನ್’ ಸಿನಿಮಾದ ಪ್ರೀರಿಲೀಸ್ ಇವೆಂಟ್ ನಡೆಯಿತು. ಚಿರಂಜೀವಿ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿ ಆಗಿ ಆಗಮಿಸಿದ್ದರು. ಅವರು ಜನರನ್ನು ಉದ್ದೇಶಿಸಿ ಮಾತನಾಡುವಾಗ ಪ್ರಮುಖ ವಿಚಾರ ಬಿಚ್ಚಿಟ್ಟರು. ‘ತಮ್ಮ ಚಿತ್ರದ ಪ್ರತಿ ಟಿಕೆಟ್ನಿಂದ 5 ರೂಪಾಯಿಯನ್ನು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ಹನುಮಾನ್ ತಂಡ ನಿರ್ಧರಿಸಿದ್ದಾರೆ. ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದರು.