ಲೈಂಗಿಕ ದೌರ್ಜನ್ಯ ಆರೋಪ: ಯಾರೇ ಇದ್ದರು ಕ್ರಮ ಕೈಗೊಳ್ಳುತ್ತೇವೆ ಎಂದ ಪರಮೇಶ್ವರ
ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಗೃಹ ಸಚಿವ ಜಿ. ಪರಮೇಶ್ವರ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
11:36 AM Apr 29, 2024 IST | Ashika S
ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಗೃಹ ಸಚಿವ ಜಿ. ಪರಮೇಶ್ವರ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
Advertisement
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಚ್ಡಿ.ರೇವಣ್ಣ ಇರಲಿ, ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿದ್ದೇವೆ. ಅಧಿಕಾರಿಗಳು ಪೆನ್ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ಎಲ್ಲ ವಿಡಿಯೋಗಳನ್ನು ಎಫ್ಎಸ್ಲ್ಗೆ ಕಳುಹಿಸುತ್ತೇವೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದು ಹೇಳಿದರು.
Advertisement
ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದರು.
Advertisement