For the best experience, open
https://m.newskannada.com
on your mobile browser.
Advertisement

ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣ: ಇಬ್ಬರು ಚಾಲಕರ ಮೇಲೆ ಎಫ್‍ಐಆರ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಚಾಲಕರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.
10:35 AM Apr 10, 2024 IST | Ashika S
ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣ  ಇಬ್ಬರು ಚಾಲಕರ ಮೇಲೆ ಎಫ್‍ಐಆರ್

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಚಾಲಕರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.

Advertisement

ಖಾಸಗಿ ಬಸ್ ಚಾಲಕ ಹಾಗೂ ಫಾರ್ಚೂನರ್ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮೃತಪಟ್ಟ ಪ್ರಕಾಶ್ ಮಗಳು ದೂರು ನೀಡಿದ್ದಾರೆ.

ಫಾರ್ಚೂನರ್ ಕಾರು ಚಾಲಕ ರಸ್ತೆಯಲ್ಲಿ ವಾಹನ ನಿಲ್ಲಿಸಿ ಹಿಂಬದಿ ಡೋರ್ ತೆಗೆದಿದ್ದ. ಈ ವೇಳೆ ಬೈಕ್ ಡೋರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಕಾಶ್ ಅವರು ಆಯಾತಪ್ಪಿ ಬೈಕ್ ಸಮೇತ ರಸ್ತೆ ಮೇಲೆ ಬಿದಿದ್ದಾರೆ. ಇದೇ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಖಾಸಗಿ ಬಸ್ ಪ್ರಕಾಶ್ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು.  ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಕಾಶ್ ಸಾವನ್ನಪ್ಪಿದ್ದಾರೆ.

Advertisement

ಹೀಗಾಗಿ ವೇಗ ಮತ್ತು ಅಜಾಗರೂಕತೆ ಚಾಲನೆ ಎಂದು ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಸಭೆಗೆ ಬೆಳಗ್ಗೆ 9 ಗಂಟೆಗೆ ಪ್ರಕಾಶ್ ಮನೆಯಿಂದ ಹೊರಟಿದ್ದರು. 12 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು.

Advertisement
Tags :
Advertisement