ಪರಿಸ್ಥಿತಿ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗುವಂತೆ ಮಾಡುತ್ತದೆ
ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ಈಗ ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದರು.
07:58 AM Feb 03, 2024 IST
|
Ashika S
ಬೆಂಗಳೂರು: ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ಈಗ ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದರು.
Advertisement
ದೇವೇಗೌಡರ ಸಿದ್ಧಾಂತವನ್ನು ನಾನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ.
ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದರು.
Advertisement
Advertisement
Next Article