ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೆಚ್ಚುವರಿ ಸಾಸ್ ಕೇಳಿದ್ದಕ್ಕೆ‌ ಚಾಕುವಿನಿಂದ ಇರಿದು ವ್ಯಕ್ತಿ ಮೇಲೆ ಹಲ್ಲೆ

ಶಹದಾರದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಸಾಸ್ ವಿಚಾರಕ್ಕೆ ಹಲ್ಲೆ ಮಾಡಿದ ಘಟನೆ ನಡೆದಿದೆ.
09:34 AM Jan 12, 2024 IST | Gayathri SG

ನವದೆಹಲಿ: ಶಹದಾರದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಸಾಸ್ ವಿಚಾರಕ್ಕೆ ಹಲ್ಲೆ ಮಾಡಿದ ಘಟನೆ ನಡೆದಿದೆ.

Advertisement

ಸಂದೀಪ್ (34ವರ್ಷ) ಅವರು ಸಂಜೆ ರಸ್ತೆಬದಿ ಮಾರುತ್ತಿರುವ ಗಾಡಿಯಿಂದ ಮೋಮೊಗಳನ್ನು ಖರೀದಿಸಲು ಹೋಗಿದ್ದರು. ಹೀಗೆ ಮೋಮೊಸ್ ಖರೀದಿಸಿದ ಬಳಿಕ ಗಾಡಿ ಮಾಲೀಕ ವಿಕಾಸ್ (22) ಬಳಿ ಹೆಚ್ಚಿನ ರೆಡ್ ಸಾಸ್ ನೀಡುವಂತೆ ಕೇಳಿದ್ದಾನೆ. ಆದರೆ ಆತ ಕಡಿಮೆ ಇದೆ ಎಂದು ಹೇಳಿ ಕೊಡಲು ನಿರಾಕರಿಸಿದ್ದಾನೆ. ಇದಾದ ಕೆಲವೇ ದಿನಗಳಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು. ಮಾತಿಗೆ ಮಾತು ಬೆಳೆದು ವಿಕಾಸ್, ಗ್ರಾಹಕ ಸಂದೀಪ್ ಮುಖಕ್ಕೆ ಎರಡು ಬಾರಿ ಇರಿದು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಕೊಲೆ ಯತ್ನದಡಿ ಗಾಡಿ ಮಾಲೀಕ ವಿಕಾಸ್‌ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸದ್ಯ ಸಂದೀಪ್ ಮುಖಕ್ಕೆ ಗಂಭೀರ ಗಾಯಗಳಾಗಿದ್ದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Advertisement

Advertisement
Tags :
LatestNewsNewsKannadaನವದೆಹಲಿಹಲ್ಲೆ
Advertisement
Next Article