ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಆತ್ಮಹತ್ಯೆ ಶಂಕೆ

  ನಗರದ ಹಿರಣ್ಯ ಫೈನಾನ್ಸ್ ಹಿಂಭಾಗದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
12:20 PM Feb 28, 2024 IST | Nisarga K
ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಆತ್ಮಹತ್ಯೆ ಶಂಕೆ

ಉಡುಪಿ:  ನಗರದ ಹಿರಣ್ಯ ಫೈನಾನ್ಸ್ ಹಿಂಭಾಗದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

Advertisement

ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಶಂಕಿಸಲಾಗಿದೆ. ಮರಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.

ಘಟನಾ ಸ್ಥಳದಲ್ಲಿದ್ದು ಎಸ್ಐ ಪುನೀತ್ ಕುಮಾರ್, ತನಿಖಾ ಸಹಾಯಕಿ ನೇತ್ರಾವತಿ, ಹೆಡ್ ಕಾನ್ಸ್ಟೇಬಲ್ ಆಶಾಲತಾ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ನೆರವಾದರು.

Advertisement

Advertisement
Tags :
deathFOUNDindiaLatestNewsManNewsKannadaSUCIDEUDUPI
Advertisement
Next Article