ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮವಾದ ಕಾರು
ಚಿತ್ರದುರ್ಗ ಜಿಲ್ಲೆ ಹಿರಿಯೂರು ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾಗಿದೆ. ಹಿರಿಯೂರು ನಗರದ ವಿವಿ ಸಾಗರ ರಸ್ತೆ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
07:15 PM Dec 25, 2023 IST | Ashitha S
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾಗಿದೆ. ಹಿರಿಯೂರು ನಗರದ ವಿವಿ ಸಾಗರ ರಸ್ತೆ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
Advertisement
ಘಟನೆಯಲ್ಲಿ ಸುಟ್ಟುಹೋದ ಕಾರು ಹೊನ್ನಾಳ್ಳಿ ಮೂಲದ ರಮೇಶ್ ಆಚಾರಿ ಎನ್ನುವವರಿಗೆ ಸೇರಿದ್ದು ಎನ್ನಲಾಗಿದೆ. ಕಾರು ಚಲಿಸುತ್ತಿದ್ದ ವೇಳೆ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದಾಗಿ ಎಚ್ಚೆತ್ತ ಕಾರಿನ ಚಾಲಕ ರಸ್ತೆಬದಿಗೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ದಾವಣಗೆರೆಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
Advertisement
Advertisement