ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸೋಮೇಶ್ವರ ಬಸ್‌ ತಂಗುದಾಣದಲ್ಲಿ ಕುಳಿತಿದ್ದ ಜೋಡಿ ಪೊಲೀಸರ ವಶಕ್ಕೆ

ಸೋಮೇಶ್ವರ ಬೀಚ್‌ ಬಸ್‌ ತಂಗುದಾಣದಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಸ್ಥಳೀಯ ಯುವಕರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಉಳ್ಳಾಲ ಅಬ್ಬಕ್ಕ ಸರ್ಕಲ್‌ ಬಳಿಯ ಖಾಸಗಿ ನರ್ಸಿಂಗ್‌ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯನ್ನು ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
07:23 PM Dec 25, 2023 IST | Ashitha S

ಉಳ್ಳಾಲ: ಸೋಮೇಶ್ವರ ಬೀಚ್‌ ಬಸ್‌ ತಂಗುದಾಣದಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಸ್ಥಳೀಯ ಯುವಕರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಉಳ್ಳಾಲ ಅಬ್ಬಕ್ಕ ಸರ್ಕಲ್‌ ಬಳಿಯ ಖಾಸಗಿ ನರ್ಸಿಂಗ್‌ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯನ್ನು ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Advertisement

ಕ್ರಿಸ್‌ ಮಸ್‌ ಪ್ರಯುಕ್ತ ಕಾಲೇಜಿಗೆ ರಜೆ ಘೋಷಿಸಿದ್ದು, ಕಾಲೇಜಿನ ಯುವಕ ಯುವತಿಯರು ಸೋಮೇಶ್ವರ ದೇವಳಕ್ಕೆ ಭೇಟಿ ನೀಡಿದ್ದರು. ಆದರೆ ಈ ಜೋಡಿ ಮಾತ್ರ ಸೋಮೇಶ್ವರ ಬಸ್‌ ತಂಗುದಾಣದಲ್ಲಿಯೇ ಕುಳಿತಿದ್ದರು. ಇದರಿಂದ ಅನುಮಾನ ಗೊಂಡ ಸ್ಥಳೀಯರು ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದು ,ಬಳಿಕ ಜೋಡಿಯನ್ನು ವಶಕ್ಕೆ ಪಡೆದು ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿ ವಾಪಸ್‌ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement
Tags :
crimeGOVERNMENTindiaKARNATAKALatestNewsನವದೆಹಲಿಮಂಗಳೂರು
Advertisement
Next Article