For the best experience, open
https://m.newskannada.com
on your mobile browser.
Advertisement

ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಯುವಕ ಆತ್ಮಹತ್ಯೆಗೆ ಶರಣು

ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಯುವಕನೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
02:59 PM May 14, 2024 IST | Chaitra Kulal
ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಯುವಕ ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಯುವಕನೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಬಾಲಾಜಿ (25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಕಳೆದ ಒಂದು ವರ್ಷದ ಹಿಂದೆ ಬಾಲಾಜಿಗೆ ಇನ್‌ಸ್ಟಾಗ್ರಾಂ ಮೂಲಕ ಮಂಡ್ಯ ಮೂಲದ ಯುವತಿಯ ಪರಿಚಯವಾಗುತ್ತದೆ. ಪರಿಚಯವು ಕ್ರಮೇಣ ಪ್ರೀತಿಗೆ ತಿರುಗಿದೆ. ಹೀಗಾಗಿ ಇಬ್ಬರು ಸಲುಗೆಯಿಂದ ತಿರುಗಾಡಿದ್ದಾರೆ.

ಆದರೆ ಇದೀಗ ಇದ್ದಕ್ಕಿದ್ದಂತೆ ಯುವತಿ, ತಾನು ಬೇರೊಬ್ಬ ಯುವಕನ ಜೊತೆ ಪ್ರೀತಿಯಲ್ಲಿ ಇರುವುದಾಗಿ ತಿಳಿಸಿದ್ದಾಳಂತೆ. ಇದರಿಂದ ಮನನೊಂದ ಬಾಲಾಜಿ, ಕಾಳು ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Advertisement
Tags :
Advertisement