For the best experience, open
https://m.newskannada.com
on your mobile browser.
Advertisement

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆ ಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ.
10:02 AM Apr 28, 2024 IST | Chaitra Kulal
ತೆಕ್ಕಟ್ಟೆ  ಇನ್ನೋವಾ ಕಾರು ಮರಕ್ಕೆ ಡಿಕ್ಕಿ  ಯುವತಿ ಸ್ಥಳದಲ್ಲೇ ಮೃತ್ಯು  ನಾಲ್ವರು ಗಂಭೀರ

ಉಡುಪಿ: ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆ ಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ.

Advertisement

ಮೃತರನ್ನು ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಎಂದು‌ ಗುರುತಿಸಲಾಗಿದೆ. ಇವರ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು.

Advertisement

ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್‌ ಹಾಗೂ ಕೋಟ ಪೊಲೀಸ್‌ ಠಾಣಾಧಿಕಾರಿ ತೇಜಸ್ವಿ, ಸಿಬಂದಿ ಪ್ರಸನ್ನ, ಕೃಷ್ಣ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಂದಾಗಿ ಮುರ್ಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್‌ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Tags :
Advertisement