ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ: ಆರ್. ಅಶೋಕ್

ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್​ನವರು ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ. ಇದೆಲ್ಲಾ ಈಗ ವರ್ಕೌಟ್ ಆಗಲ್ಲ ಎಂದು ಹೇಳಿದ್ದಾರೆ.
03:46 PM Jan 27, 2024 IST | Ashika S

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್​ನವರು ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ. ಇದೆಲ್ಲಾ ಈಗ ವರ್ಕೌಟ್ ಆಗಲ್ಲ ಎಂದು ಹೇಳಿದ್ದಾರೆ.

Advertisement

ರಾಜ್ಯ ಸರ್ಕಾರದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ಹಿಂದಿನ ಎಲ್ಲಾ ಯೋಜನೆ ಸ್ಥಗಿತವಾಗಿದೆ. ಲ್ಯಾಪ್ ಟಾಪ್ ಕೂಡ ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ. ಕೇವಲ ಟಾಪ್​ಗೆ ಹಣ ಸರಬರಾಜು ಅಷ್ಟೇ. ಇದರ ವಿರುದ್ಧ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಂಬಂಧ ಮಧ್ಯಾಹ್ನದ ಮೇಲೆ ಚರ್ಚೆ ನಡೆಯಲಿದೆ. ಮುಸ್ಲಿಂರಿಗೆ 10 ಸಾವಿರ ರೂ. ಕೋಟಿ, ರೈತರಿಗೆ 105 ಕೋಟಿ ರೂ. ನೆರವು ಇದು ರಾಜ್ಯ ಸರ್ಕಾರದ ಧೋರಣೆ ಎಂದು ಕಿಡಿಕಾರಿದ್ದಾರೆ.

Advertisement

ಕಾರ್ಯಕಾರಿಣಿಗೆ ಕೆಲವರ ಗೈರು ವಿಚಾರವಾಗಿ ಮಾತನಾಡಿದ ಅವರು, ಎಲ್ಲರಿಗೂ ಆಹ್ವಾನ ಕಳುಹಿಸಲಾಗಿದೆ. ಕಾರಣಾಂತರಗಳಿಂದ ಕೆಲವರು ಬಂದಿಲ್ಲ. ಅವರ ಜೊತೆ ಮಾತನಾಡುತ್ತೇವೆ. ಯಾವುದೇ ಸಮಸ್ಯೆ ಇಲ್ಲ. ಎಲ್ಲವು ಸುಗಮವಾಗಿದೆ. ಎಲ್ಲರಿಗೂ ಆಹ್ವಾನ ಹೋಗಿದೆ ಎಂದಿದ್ದಾರೆ.

Advertisement
Tags :
LatetsNewsNewsKannadaಅರಮನೆ ಮೈದಾನಆರ್. ‌ಅಶೋಕ್ಕಾರ್ಯಕಾರಿಣಿ ಸಭೆಬಿಜೆಪಿವಿಧಾನಸಭೆ
Advertisement
Next Article