ಒಂದೇ ದಿನ ಮೂರು ಕಡೆ ಕಳ್ಳತನ: ಪ್ರಕರಣ ದಾಖಲು
ಒಂದೇ ದಿನ ಮೂರು ಕಡೆ ಕಳ್ಳತನವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನ ಕಳ್ಳರು ದೋಚಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ.
12:44 PM Dec 04, 2023 IST
|
Ashika S
ರಾಯಚೂರು: ಒಂದೇ ದಿನ ಮೂರು ಕಡೆ ಕಳ್ಳತನವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನ ಕಳ್ಳರು ದೋಚಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ.
Advertisement
ನಗರದ ಬಸ್ ನಿಲ್ದಾಣದ ಬಳಿ ಸಲೀಂ ಎಂಬವರ ಮೊಬೈಲ್ ಅಂಗಡಿಯ ಬೀಗ ಒಡೆದು ಸುಮಾರು 5 ಲಕ್ಷ ರೂ. ಮೌಲ್ಯದ 60 ಮೊಬೈಲ್ಗಳನ್ನು ಕಳ್ಳತನ ಮಾಡಲಾಗಿದೆ.ಕಳ್ಳತನದ ವೇಳೆ ಸಿಸಿ ಕ್ಯಾಮೆರಾಗಳನ್ನು ಬೇರೆಡೆಗೆ ತಿರುಗಿಸಿದ್ದಾರೆ.
ಮೊಬೈಲ್ ಅಂಗಡಿ ಅಷ್ಟೇ ಅಲ್ಲದೇ, ಅದೇ ಪ್ರದೇಶದಲ್ಲಿ ಇನ್ನೂ ಎರಡು ಕಡೆ ಕಳ್ಳತನ ಮಾಡಲಾಗಿದೆ. ಮನೆ ಒಂದರ ಕೆಳಗೆ ನಿಲ್ಲಿಸಿದ್ದ ಒಂದು ಬೈಕ್ ಹಾಗೂ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮನೆಗೆ ನುಗ್ಗಿ ಒಂದು ಲ್ಯಾಪ್ಟಾಪ್ ಕಳ್ಳತನ ಮಾಡಲಾಗಿದೆ. ಬಳಿಕ ಕಳ್ಳರು ಕದ್ದ ಬೈಕ್ನಲ್ಲೇ ಪರಾರಿಯಾಗಿದ್ದಾರೆ.
Advertisement
ಈ ಸಂಬಂಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Advertisement
Next Article