ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟೈರ್ ಸ್ಫೋಟ: ರಸ್ತೆ ಮಧ್ಯದಲ್ಲಿ ಹೊತ್ತಿ ಉರಿದ ಬಸ್

ಟೈರ್ ಸ್ಫೋಟದಿಂದ ಬೆಂಕಿ ತಗುಲಿ  ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್​ ಹೊತ್ತಿ ಉರಿದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿಯ ಎನ್​ಎಚ್ 50 ರಲ್ಲಿ ನಡೆದಿದೆ. 
10:56 AM Dec 15, 2023 IST | Ashika S

ವಿಜಯಪುರ:  ಟೈರ್ ಸ್ಫೋಟದಿಂದ ಬೆಂಕಿ ತಗುಲಿ  ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್​ ಹೊತ್ತಿ ಉರಿದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿಯ ಎನ್​ಎಚ್ 50 ರಲ್ಲಿ ನಡೆದಿದೆ.

Advertisement

ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ಖಾಸಗಿ ಬಸ್ ಒಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 50ರ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಸಮೀಪ ಸಂಚರಿಸುತ್ತಿದ್ದಾಗ ಏಕಾಏಕಿ ಟೈರ್ ಬ್ಲಾಸ್ಟ್ ಆಗಿ ಅವಘಡ ಸಂಭವಿಸಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಚಾಲಕ ಬಸ್ ಅನ್ನು  ನಿಲ್ಲಿಸಿದ್ದಾನೆ. ತಕ್ಷಣವೇ ಪ್ರಯಾಣಿಕರು  ಕೆಳಗಿಳಿದಿದ್ದಾರೆ. ಕ್ಷಣಮಾತ್ರದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡಿದೆ.

Advertisement

ಬಸ್ ನಲ್ಲಿದ್ದ  ಬೆಲೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಲಗೇಜ್ ಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕ‌ದಳದ ಸಿಬ್ಬಂದಿ ದೌಡಾಯಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Tags :
LatetsNewsNewsKannadaಜನತಾ ಟ್ರಾವೆಲ್ಸ್‌ಟೈರ್‌ ಸ್ಫೋಟಬಸ್ಬೆಂಕಿ
Advertisement
Next Article