ಭಾರತದ 12 ಯುವಕರನ್ನು ಉಕ್ರೇನ್ಗೆ ಕಳುಹಿಸಿದ ರಷ್ಯಾ: ಸಂಕಷ್ಟದಲ್ಲಿ ಕನ್ನಡಿಗರು
ಉಕ್ರೇನ್ ವಿರುದ್ಧದ ಯುದ್ದಕ್ಕೆ ಕನ್ನಡಿಗರ ಬಳಕೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕಲಬುರಗಿಯ ಮೂವರು ಯುವಕರು ಸಂಕಷ್ಟದಲ್ಲಿದ್ದಾರೆ ಎಂದು ವರದಿಯಾಗಿದೆ.
11:39 AM Feb 22, 2024 IST
|
Ashitha S
ದೆಹಲಿ: ಉಕ್ರೇನ್ ವಿರುದ್ಧದ ಯುದ್ದಕ್ಕೆ ಕನ್ನಡಿಗರ ಬಳಕೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕಲಬುರಗಿಯ ಮೂವರು ಯುವಕರು ಸಂಕಷ್ಟದಲ್ಲಿದ್ದಾರೆ ಎಂದು ವರದಿಯಾಗಿದೆ.
Advertisement
ಉದ್ಯೋಗದ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ 12 ಭಾರತೀಯ ಯುವಕರನ್ನು ಉಕ್ರೇನ್ ವಿರುದ್ಧದ ಯುದ್ದಕ್ಕೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.12 ಮಂದಿ ಯುವಕರ ಪೈಕಿ ಮೂವರು ಕಲಬುರಗಿಯವರು ಎಂದು ತಿಳಿದು ಬಂದಿದೆ.
12 ಮಂದಿ ಯುವಕರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರಬೇಕು ಎಂದು ಕೇಂದ್ರ ಸರ್ಕಾರವನ್ನು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಒತ್ತಾಯಿಸಿದ್ದಾರೆ. ರಷ್ಯಾದಲ್ಲಿ ಸಿಲುಕಿದವರಲ್ಲಿ ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಯುವಕರು ಸೇರಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
Next Article