ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭಾ ಚುನಾವಣೆ; ರಾಜ್ಯದಲ್ಲಿ ಪ್ರಚಾರಕ್ಕೆ ಯುಪಿ ಸಿಎಂ ಎಂಟ್ರಿ

 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಯುಗಾದಿ ಹಬ್ಬದ ಮಾರನೇ ದಿನದಿಂದ ಪ್ರಚಾರ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದ್ದಾರೆ.
10:31 AM Apr 07, 2024 IST | Ashitha S

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಯುಗಾದಿ ಹಬ್ಬದ ಮಾರನೇ ದಿನದಿಂದ ಪ್ರಚಾರ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏಪ್ರಿಲ್ 10 ರಂದು ಹೊಸದುರ್ಗ, ಏಪ್ರಿಲ್ 12ರಂದು ಹೊಳಲ್ಕೆರೆಗೆ ಭೇಟಿ ನೀಡಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಏಪ್ರಿಲ್ 16, 17ರಂದು ಹಿರಿಯೂರಿಗೆ ಆಗಮಿಸಲಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಏಪ್ರಿಲ್ 17 ಅಥವಾ 18ರಂದು ಮೊಳಕಾಲ್ಮೂರು, ಚಳ್ಳಕೆರೆ, ಪಾವಗಡದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು ದಿನಾಂಕ ನಿಗದಿಪಡಿಸಬೇಕಿದೆ ಎಂದು ತಿಳಿಸಿದ್ದಾರೆ.

Advertisement

Advertisement
Tags :
BJPCongressGOVERNMENTindiaKARNATAKANewsKarnatakaUP CM
Advertisement
Next Article