ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
07:07 PM May 12, 2024 IST | Ashika S
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
Advertisement
ಬಹು ನಿರೀಕ್ಷಿತ ರೈಲು ಪ್ರಾರಂಭವು ದೈನಂದಿನ ಪ್ರಯಾಣಿಕರಿಗೆ ಸಾಕಷ್ಟು ಪ್ರಯೋಜನಕಾರಿಯಾಗಲಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ರೈಲು ಎರ್ನಾಕುಲಂನಿಂದ ಬೆಳಗ್ಗೆ 5 ಗಂಟೆಗೆ ಹೊರಟು ಮಧ್ಯಾಹ್ನ 1.35 ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಮಧ್ಯಾಹ್ನ 2.05 ಕ್ಕೆ ಹೊರಟು ರಾತ್ರಿ 10.45 ಕ್ಕೆ ಮರಳಿ ಎರ್ನಾಕುಲಂ ತಲುಪಲಿದೆ.
Advertisement
ಎರ್ನಾಕುಲಂ- ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ಈರೋಡ್ ಮತ್ತು ಸೇಲಂ ನಿಲ್ದಾಣಗಳಲ್ಲಿ ಕೆಲವು ನಿಮಿಷಗಳ ಕಾಲ ನಿಲುಗಡೆ ಮಾಡಲಿದೆ.
Advertisement