ಕಿಡ್ನಾಪ್ ಕೇಸ್ ನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಿದ ಸಂತ್ರಸ್ತೆಯರು
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್ಐಟಿ ಬಳಿ ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ ಅಂಶ ಬಯಲಿಗೆ ಬಂದಿದೆ.
ಈಗ ಹೆಚ್.ಡಿ ದೇವೇಗೌಡರ ಹಿರಿಯ ಸೊಸೆ ಭವಾನಿ ರೇವಣ್ಣಗೂ ಸಂಕಷ್ಟ ಕಾದಿದೆಯಾ ಎನ್ನುವ ಪ್ರಶ್ನೆ ಮೂಡಿದೆ.
ಸಂತ್ರಸ್ತೆಯರು 2 ಕೇಸ್ನಲ್ಲಿ ಭವಾನಿ ಹೆಸರನ್ನು ಉಲ್ಲೇಖಿಸಿದ್ದಾರೆ. ಎರಡು ಕೇಸ್ಗೆ ಸಂಬಂಧಿಸಿದಂತೆ ಭವಾನಿಯವರು ಕರೆದರು ಎಂದು ಹೇಳಿ ಕಿಡ್ನಾಪ್ ಆರೋಪವಿದೆ.
ಹೀಗಾಗಿ ಕಿಡ್ನಾಪ್ ಕೇಸ್ನಲ್ಲಿ ಭವಾನಿಗೆ ಕಾನೂನು ಸಂಕಷ್ಟ ಸಾಧ್ಯತೆ ಇರಬಹುದು. ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತೀವ್ರ ತನಿಖೆ ನಡೆಸ್ತಿದ್ದಾರೆ. ಈಗಾಗಲೇ ಕೇಸ್ ಸಂಬಂಧ ಭವಾನಿ ಅವರಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಒಂದು ಲೈಂಗಿಕ ಕಿರುಕುಳ ಆರೋಪ ಮತ್ತೊಂದು ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣ ಮತ್ತು ಮಗ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಾಲು ಸಾಲು ಆರೋಪಗಳು ಮಾಡಲಾಗಿದೆ.
ಇದರಿಂದ ಮಗನ ಕೇಸ್ನಿಂದ ತಾಯಿಗೆ ಸಂಕಷ್ಟ ಎದುರಾಗುತ್ತಾ ಎಂದು ಕಾದು ನೋಡಬೇಕಿದೆ.