ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಪ್​ ಎತ್ತಿದ ಆರ್​ಸಿಬಿ ಹೆಣ್ಣು ಹುಲಿಗಳು: ವಿಜಯ್ ಮಲ್ಯ ಹರ್ಷ ವ್ಯಕ್ತ

ಭಾನುವಾರ (ಮಾ.17) ರಾಷ್ಟ್ರ ರಾಜಧಾನಿ ದೆಹಲಿಯ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಎರಡನೇ ಆವೃತ್ತಿಯ ಫೈನಲ್​ ಪಂದ್ಯದಲ್ಲಿ ಸ್ಮೃತಿ ಮಂದಾನ ನೇತೃತ್ವದ ಆರ್​ಸಿಬಿ ತಂಡ ಭರ್ಜರಿ ಜಯ ದಾಖಲಿಸುವ ಮೂಲಕ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
07:47 AM Mar 18, 2024 IST | Ashitha S

ಬೆಂಗಳೂರು: ಭಾನುವಾರ (ಮಾ.17) ರಾಷ್ಟ್ರ ರಾಜಧಾನಿ ದೆಹಲಿಯ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಎರಡನೇ ಆವೃತ್ತಿಯ ಫೈನಲ್​ ಪಂದ್ಯದಲ್ಲಿ ಸ್ಮೃತಿ ಮಂದಾನ ನೇತೃತ್ವದ ಆರ್​ಸಿಬಿ ತಂಡ ಭರ್ಜರಿ ಜಯ ದಾಖಲಿಸುವ ಮೂಲಕ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

Advertisement

ಆರ್​ಸಿಬಿ ವುಮೆನ್ಸ್​ ಟೀಮ್​ ಗೆಲುವು ದಾಖಲಿಸುತ್ತಿದ್ದಂತೆ ಅಭಿನಂದನೆ ಟ್ವೀಟ್ ಮೂಲಕ ದಿಢೀರ್​ ಪ್ರತ್ಯಕ್ಷವಾದ ಉದ್ಯಮಿ ವಿಜಯ್ ಮಲ್ಯ, ವನಿತೆಯರಿಗೆ ಶುಭಹಾರೈಸಿದ್ದಾರೆ.

'WPL ಗೆದ್ದ RCB ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರ್‌ಸಿಬಿ ಪುರುಷರ ತಂಡವು ಸಹ ಐಪಿಎಲ್ ಪಟ್ಟ ಗೆದ್ದರೆ ಅದು ಡಬಲ್ ಗೆಲುವಾಗಿರುತ್ತದೆ. ಶುಭವಾಗಲಿ' ಎಂದು ವಿಜಯ್​ ಮಲ್ಯ ಟ್ವೀಟ್​ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಈ ಟ್ವೀಟ್ ನೋಡುತ್ತಿದ್ದಂತೆ ಮಿಶ್ರ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿರುವ ನೆಟ್ಟಿಗರು, ಹಾಸ್ಯಸ್ಪದವಾಗಿ ಕಮೆಂಟ್ ಮಾಡಿದ್ದಾರೆ.

Advertisement

'ಒಬ್ಬರು ಇಂದು ಭಾನುವಾರ ಬ್ಯಾಂಕ್ ರಜೆ' ಎಂದರೆ ಮತ್ತೊಬ್ಬರು, 'ಒಂದು ಡೀಲ್ ಮಾಡಿಕೊಳ್ಳೋಣ, ಆರ್​ಸಿಬಿ ಪುರಷರ ತಂಡ ಈ ಬಾರಿಯ ಐಪಿಎಲ್ ಗದ್ದರೆ ನೀವು ಭಾರತಕ್ಕೆ ಬರುತ್ತೀರಾ' ಎಂದು ಕಮೆಂಟ್ ಮಾಡಿದ್ದಾರೆ.

Advertisement
Tags :
indiaLatestNewsNewsKannadaRCBvijaymalya
Advertisement
Next Article