ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಏರ್ಪೋರ್ಟನಲ್ಲಿ ವೀರ್ ದಾಸ್‌ ‘ಎಮ್ಮಿ’ಪ್ರಶಸ್ತಿ ತಪಾಸಣೆ : ಕಾರಣ ಗೊತ್ತಾ?

ನಟ ಹಾಗೂ ಹಾಸ್ಯ ಕಲಾವಿದ ವೀರ್‌ ದಾಸ್ ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ‘ಎಮ್ಮಿ’ ಪ್ರಶಸ್ತಿಯನ್ನು ಸಿಕ್ಕಿತ್ತು.
06:45 AM Nov 27, 2023 IST | Ramya Bolantoor

ಬೆಂಗಳೂರು : ನಟ ಹಾಗೂ ಹಾಸ್ಯ ಕಲಾವಿದ ವೀರ್‌ ದಾಸ್ ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ‘ಎಮ್ಮಿ’ ಪ್ರಶಸ್ತಿಯನ್ನು ಸಿಕ್ಕಿತ್ತು. ಆದರೆ ಇದೀಗ ಅವರನ್ನು ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅವರು ಟ್ವೀಟ್‌ ನಲ್ಲಿ ಹಂಚಿಕೊಂಡಿದ್ದಾರೆ.

Advertisement

ಭದ್ರತಾ ಸಿಬ್ಬಂದಿಯೊಬ್ಬರು ‘ಬ್ಯಾಗ್‌ನಲ್ಲಿ ಚೂಪಾದ ಮೂರ್ತಿ ಇದೆಯೇ’ ಎಂದು ಪ್ರಶ್ನಿಸಿದಾಗ ‘ಇಲ್ಲ ಸರ್‌ ಅದು ಪ್ರಶಸ್ತಿ. ಅದಕ್ಕೆ ಚೂಪಾದ ರೆಕ್ಕೆ ಇವೆ’ ಎಂದು ವೀರ್‌ ಹೇಳಿದ್ದಾರೆ. ಬಳಿಕ ಅದನ್ನು ತೆಗೆದು ಅಧಿಕಾರಿಗೆ ತೋರಿಸಿದಾಗ ಅವರು ‘ಚೆನ್ನಾಗಿದೆ. ನೀವೇನು ಮಾಡುತ್ತೀರಿ’ ಎಂದು ಕೇಳಿದ್ದಾರೆ. ಅದಕ್ಕೆ ವೀರ್‌, ‘ಜೋಕ್‌ ಮಾಡುತ್ತೇನೆ’ ಎಂದಿದ್ದಾರೆ. ಹೀಗೆ ಇಬ್ಬರ ಸಂಭಾಷಣೆ ನಗುವಿನಲ್ಲಿ ಅಂತ್ಯವಾಗಿದೆ. ಎಮ್ಮಿ ಪ್ರಶಸ್ತಿ ಟ್ರೋಫಿಯು ಮನುಷ್ಯಾಕಾರದಲ್ಲಿದ್ದು, ಇದರ ಬಾಹುಗಳಿಗೆ ಎರಡು ಚೂಪಾದ ರೆಕ್ಕೆಗಳಿವೆ ಎಂದು ವೀರ್‌ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

Advertisement
Advertisement
Tags :
AIRPORTLatestNewsNewsKannadaಬೆಂಗಳೂರು
Advertisement
Next Article