ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ಆರೋಪಿಗಳು ಬಂಧನ

ಹೆಚ್​ಎಸ್​ಆರ್ ಲೇಔಟ್ ನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಕೊಂದ ಘಟನೆ ನಡೆದಿದೆ.
12:43 PM Jan 13, 2024 IST | Gayathri SG

ಬೆಂಗಳೂರು: ಹೆಚ್​ಎಸ್​ಆರ್ ಲೇಔಟ್ ನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಕೊಂದ ಘಟನೆ ನಡೆದಿದೆ.

Advertisement

ಸದ್ಯ ಹೆಚ್​ಎಸ್​ಆರ್ ಲೇಔಟ್​ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ ವ್ಯಕ್ತಿ ಇದೇ ತಿಂಗಳ 09ರಂದು ಹೆಚ್​ಎಸ್​ಆರ್ ಲೇಔಟ್​ನ ಮನೆಯಲ್ಲಿ ಆರೋಪಿ ನಂದಿನಿಬಾಯಿ ತನ್ನ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ತನ್ನ ಪತಿ ವೆಂಕಟ್ ನಾಯಕ್ ತಲೆ ಮೇಲೆ ರುಬ್ಬುವ ಗುಂಡು ಹಾಕಿ ಕೊಲೆ ಮಾಡಿದ್ದರು.

ನಂದಿನಿ ಬಾಯಿ ಗಂಡ ಮನೆಯಲ್ಲಿ ಇಲ್ಲ ಎಂದು ಹೇಳಿ ಜನವರಿ‌ 09 ರಂದು ಪ್ರಿಯಕರ ನಿತೇಶ್​ನನ್ನು ಹೆಚ್​ಎಸ್​ಆರ್ ಲೇಔಟ್​ನ ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಗಂಡ ವೆಂಕಟನಾಯಕ್ ಧಿಡೀರ್ ಮನೆಗೆ ಬಂದಿದ್ದ. ಮನೆಗೆ ಕಾಲಿಡುತ್ತಿದ್ದಂತೆ ರೂಮ್​ನಲ್ಲಿ ತನ್ನ ಪತ್ನಿ ಬೇರೊಬ್ಬನ ಜೊತೆ ಆತ್ಮೀಯ ಸಲುಗೆಯಲ್ಲಿದ್ದದನ್ನು ಕಂಡು ಕೋಪಗೊಂಡಿದ್ದ. ಬಳಿಕ ಪತಿ-ಪತ್ನಿ ನಡುವೆ ಗಲಾಟೆಯಾಗಿದ್ದು ಜಗಳ ತಾರಕ್ಕಕ್ಕೇರಿ ಕೊಲೆ ನಡೆದಿದೆ. ನಂದಿನಿ ಹಾಗೂ ಆಕೆಯ ಪ್ರಿಯಕರ ಇಬ್ಬರು ಸೇರಿ ವೆಂಕಟನಾಯಕ್​ನ ತಲೆ ಮೇಲೆ ರುಬ್ಬುವ ಗುಂಡು ಎತ್ತಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Advertisement

Advertisement
Tags :
BreakingNewsLatestNewsNewsKannadaಬೆಂಗಳೂರು
Advertisement
Next Article