ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ರಸ್ತೆ ದಾಟಿ ಆತಂಕ ಸೃಷ್ಟಿಸಿದ ಒಂಟಿಸಲಗ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ಒಂಟಿ ಸಲಗವೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ.
12:43 PM Mar 08, 2024 IST
|
Ashitha S
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ಒಂಟಿ ಸಲಗವೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ.
Advertisement
ಸುಬ್ರಹ್ಮಣ್ಯ-ಹರಿಹರ ಪಲ್ಲತ್ತಡ್ಕ ರಸ್ತೆಯ ಸಮೀಪ ಇರುವ ಈ ಐನೆಕಿದು ಶಾಲಾ ಪ್ರದೇಶವಾಗಿದ್ದು ಐನೆಕಿದು ಕಡೆಯಿಂದ ಕೋಟೆಗೆ ಸಂಪರ್ಕಿಸುವ ರಸ್ತೆಯನ್ನು ಕಾಡಾನೆ ದಾಟಿ ಹೋಗಿದ್ದು ಘಟನೆಯಿಂದ ಸ್ಥಳೀಯ ಜನತೆ ಭಯಭೀತರಾಗಿದ್ದಾರೆ. ಗ್ರಾಮೀಣ ಪ್ರದೇಶವಾಗಿರುವ ಇಲ್ಲಿ ಶಾಲೆ, ಹಾಲು ಹೀಗೆ ಎಲ್ಲದಕ್ಕೂ ಈ ರಸ್ತೆಯಲ್ಲೇ ಅವಲಂಬಿಸಿರುವುದರಿಂದ ಸಹಜವಾಗಿಯೇ ಯಾವ ಸಂದರ್ಭದಲ್ಲೂ ಆನೆ ದಾಳಿ ಮಾಡಬಹುದೆಂಬ ಭೀತಿ ಎದುರಾಗಿದೆ. ಕೆಳದ ವರ್ಷ ಇದೇ ಭಾಗದಲ್ಲಿ ಕಾಡಾನೆ ಇಬ್ಬರನ್ನು ಬಲಿ ಪಡೆದಿದ್ದು ಅರಣ್ಯ ಇಲಾಖೆ ಶೀಘ್ರವೇ ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Advertisement
Advertisement
Next Article