For the best experience, open
https://m.newskannada.com
on your mobile browser.
Advertisement

ರಜೌರಿ ಎನ್ಕೌಂಟರ್: ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕಳೆದ ದಿನ ಉಗ್ರರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಇಂದು(ನ.24) ಶ್ರದ್ಧಾಂಜಲಿ ಸಲ್ಲಿಸಿದರು.
12:32 PM Nov 24, 2023 IST | Ashitha S
ರಜೌರಿ ಎನ್ಕೌಂಟರ್  ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕಳೆದ ದಿನ ಉಗ್ರರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಇಂದು(ನ.24) ಶ್ರದ್ಧಾಂಜಲಿ ಸಲ್ಲಿಸಿದರು.

Advertisement

ಬುಧವಾರ ಮತ್ತು ಗುರುವಾರ ದಾರಂಸಾಲ್ನ ಬಾಜಿಮಲ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ 36 ಗಂಟೆಗಳ ಕಾಲ ನಡೆದ ಎನ್ಕೌಂಟರ್ನಲ್ಲಿ ಅಫ್ಘಾನಿಸ್ತಾನದಲ್ಲಿ ತರಬೇತಿ ಪಡೆದ ಲಷ್ಕರ್-ಎ-ತೈಬಾ (ಎಲ್ಇಟಿ) ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಕಾರ್ಯಾಚರಣೆ ವೇಳೆ ಇಬ್ಬರು ಕ್ಯಾಪ್ಟನ್ಗಳು ಸೇರಿದಂತೆ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಎನ್ಕೌಂಟರ್ನಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿಗೆ ಆರ್ಮಿ ಜನರಲ್ ಹಾಸ್ಪಿಟಲ್ ಮತ್ತು ಸೇನೆಯು ಪುಷ್ಪಾರ್ಪಣೆ ಕಾರ್ಯಕ್ರಮ ಆಯೋಜಿಸಿತ್ತು. ಇದರಲ್ಲಿ 'ಜನರಲ್ ಆಫೀಸರ್ ಕಮಾಂಡಿಂಗ್ ರೋಮಿಯೋ ಫೋರ್ಸ್' ಮತ್ತು ಇತರೆ ಪೊಲೀಸ್ ಅಧಿಕಾರಿಗಳು ಪುಷ್ಪಗುಚ್ಛಗಳನ್ನಿಡುವ ಮೂಲಕ ಗೌರವ ವಂದನೆ ಸಲ್ಲಿಸಿದರು.

Advertisement

ಪೂಂಚ್ ನಿವಾಸಿ ಹಾವ್ ಅಬ್ದುಲ್ ಮಜೀದ್ ಅವರ ಪುಷ್ಪಾರ್ಚನೆ ಕಾರ್ಯಕ್ರಮ ಪೂಂಚ್ನಲ್ಲಿ ನೆರವೇರಿತು.

Advertisement
Tags :
Advertisement